11:00 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ವಿದ್ಯುತ್ ಖಾಸಗೀಕರಣ: ತೊಕ್ಕೊಟ್ಟು, ಕೈಕಂಬ ಹಾಗೂ ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ

08/11/2023, 18:28

ಮಂಗಳೂರು(reporterkarnataka.com): ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ, ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು.
ಮಂಗಳೂರಿನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಸುನಿಲ್ ಕುಮಾರ್ ಬಜಾಲ್, ಎಚ್ ವಿ.ರಾವ್, ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಸೀತಾರಾಮ ಬೇರಿಂಜ, ಜಯಂತಿ ಶೆಟ್ಟಿ, ಸಂತೋಷ್ ಬಜಾಲ್, ಎಂ.ದೇವದಾಸ್ ಅವರು ಮಾತನಾಡಿದರೆ, ಗುರುಪುರ ಕೈಕಂಬದಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಮುನೀರ್ ಕಾಟಿಪಳ್ಳ, ಸದಾಶಿವದಾಸ್, ನೋಣಯ್ಯ ಗೌಡ, ಮನೋಜ್ ವಾಮಂಜೂರು‌ ಅವರು ಮಾತನಾಡಿದರು. ತೊಕ್ಕೊಟುನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಜೆ.ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ಜಯಂತ ನಾಯಕ್, ಕ್ರಷ್ಣಪ್ಪ ಸಾಲ್ಯಾನ್, ರೋಹಿದಾಸ್ ಭಟ್ನಗರರವರು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು