2:17 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸೃಷ್ಟಿ ಕಲಾವಿದ್ಯಾಲಯ ಯಕ್ಷೋತ್ಸವ: ನಿಯಮದ ನೆಪದಲ್ಲಿ ಯಕ್ಷಗಾನಕ್ಕೆ ಕಿರುಕುಳ ಖಂಡನೀಯ

08/11/2023, 22:41

ಮಂಗಳೂರು(reporterkarnataka.com): ಹೆತ್ತವರು ತಮ್ಮ ಮಕ್ಕಳಿಗೆ ತಮ್ಮೂರಿನ ಸಂಸ್ಕೃತಿ, ಕಲೆಯನ್ನು ಕಲಿಸುವ ಮೂಲಕ ಮುಂದಿನ ಪೀಳಿಗೆಗೆ ಯಶಸ್ವಿಯಾಗಿ ದಾಟಿಸುವ ಕೆಲಸ ಮಾಡಬೇಕು ಎಂದು ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಹೇಳಿದರು.
ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಸೃಷ್ಟಿಕಲಾ ವಿದ್ಯಾಲಯದ ಯಕ್ಷೋತ್ಸವ ಉದ್ಘಾಟಿಸಿ ಮಾತನಾಡಿದರು.


ಇತ್ತೀಚೆಗೆ ಕಾನೂನು ನಿಯಮದ ಮೂಲಕ ನಮ್ಮ ಮಣ್ಣಿನ ಸಂಸ್ಕೃತಿಯನ್ನು ಹತ್ತಿಕ್ಕುವ ಕಾರ್ಯ ನಡೆಸುತ್ತಿದೆ. ಕುಂದಾಪುರದ ಹೇರಿಕುದ್ರುವಿನಲ್ಲಿ ರಾತ್ರಿ 10.30ಗೆ ಸಮಯ ಮೀರಿದೆ ಎಂದು ಮಕ್ಕಳ ಯಕ್ಷಗಾನವನ್ನು ನಿಲ್ಲಿಸಿರುವುದು ಖಂಡನೀಯ ಎಂದು ಅವರು ಹೇಳಿದರು.

ಸೃಷ್ಟಿ ಕಲಾವಿದ್ಯಾಲಯ ನೂರಾರು ಮಕ್ಕಳಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನವನ್ನು ಯಶಸ್ವಿಯಾಗಿ ಬೋಧಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಕರಾವಳಿಯ ಯಕ್ಷಗಾನ ರಾಜಧಾನಿಯಲ್ಲಿ ಎಲ್ಲೆಡೆ ವಿಜೃಂಬಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಎಪಿಎಸ್‌ ಪಬ್ಲಿಕ್‌ ಸ್ಕೂಲ್‌ ಪ್ರಾಂಶುಪಾಲೆ ಶಾಲಿನಿ ಜಗದೀಶ್‌ ಮಾತನಾಡಿ, ಯಕ್ಷಗಾನ ನೋಡುವುದರಿಂದ, ಮಾಡುವುದರಿಂದ ಮನಸ್ಸಿಗೆ ಹಿತವಾಗುತ್ತದೆ ಎಂದು ನುಡಿದರು.
ಸೃಷ್ಟಿ ಕಲಾ ವಿದ್ಯಾಲಯ ಸ್ಥಾಪಕಾಧ್ಯಕ್ಷ ಛಾಯಾಪತಿ ಕಂಚಿಬೈಲ್‌, ಭಾಗವತ ಸುಬ್ರಾಯ ಹೆಬ್ಬಾರ್ ಇದ್ದರು.
ಅನಾರೋಗ್ಯ ನಿಮಿತ್ತ ಕಲಾವಿದ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಮನೆಯಲ್ಲಿಯೇ ಸೃಷ್ಟಿ ಕಲಾಭೂಷಣ ಪ್ರಶಸ್ತಿ ನೀಡಲಾಗುವುದು ಎಂದು ವಿದ್ಯಾಲಯದ ಅಧ್ಯಕ್ಷ ಛಾಯಪತಿ ಕಂಚಿಬೈಲ್‌ ತಿಳಿಸಿದರು. ಚೆಂಡೆವಾದಕ ಶ್ರೀನಿವಾಸ ಗುಂಡ ಇದ್ದರು. ಶ್ರೀನಿವಾಸ ಕೆಮ್ತೂರು ಕಾರ್ಯಕ್ರ ನಿರೂಪಿಸಿದರು.
ಯಕ್ಷಗಾನ ಪ್ರದರ್ಶನ: ಕಲಾವಿದ ನಿತ್ಯಾನಂದ ನಾಯಕ್‌ ಮಾರ್ಗದರ್ಶನದಲ್ಲಿ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ರಾಜ್‌ ಪರ್ಕಳ ನಿರ್ದೇಶನದಲ್ಲಿ ದ್ರೌಪದಿ ಪ್ರತಾಪ ಮತ್ತು ಶ್ವೇತಕುಮಾರ ಚರಿತ್ರೆ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು