1:31 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸೃಷ್ಟಿ ಕಲಾವಿದ್ಯಾಲಯ ಯಕ್ಷೋತ್ಸವ: ನಿಯಮದ ನೆಪದಲ್ಲಿ ಯಕ್ಷಗಾನಕ್ಕೆ ಕಿರುಕುಳ ಖಂಡನೀಯ

08/11/2023, 22:41

ಮಂಗಳೂರು(reporterkarnataka.com): ಹೆತ್ತವರು ತಮ್ಮ ಮಕ್ಕಳಿಗೆ ತಮ್ಮೂರಿನ ಸಂಸ್ಕೃತಿ, ಕಲೆಯನ್ನು ಕಲಿಸುವ ಮೂಲಕ ಮುಂದಿನ ಪೀಳಿಗೆಗೆ ಯಶಸ್ವಿಯಾಗಿ ದಾಟಿಸುವ ಕೆಲಸ ಮಾಡಬೇಕು ಎಂದು ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಹೇಳಿದರು.
ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಸೃಷ್ಟಿಕಲಾ ವಿದ್ಯಾಲಯದ ಯಕ್ಷೋತ್ಸವ ಉದ್ಘಾಟಿಸಿ ಮಾತನಾಡಿದರು.


ಇತ್ತೀಚೆಗೆ ಕಾನೂನು ನಿಯಮದ ಮೂಲಕ ನಮ್ಮ ಮಣ್ಣಿನ ಸಂಸ್ಕೃತಿಯನ್ನು ಹತ್ತಿಕ್ಕುವ ಕಾರ್ಯ ನಡೆಸುತ್ತಿದೆ. ಕುಂದಾಪುರದ ಹೇರಿಕುದ್ರುವಿನಲ್ಲಿ ರಾತ್ರಿ 10.30ಗೆ ಸಮಯ ಮೀರಿದೆ ಎಂದು ಮಕ್ಕಳ ಯಕ್ಷಗಾನವನ್ನು ನಿಲ್ಲಿಸಿರುವುದು ಖಂಡನೀಯ ಎಂದು ಅವರು ಹೇಳಿದರು.

ಸೃಷ್ಟಿ ಕಲಾವಿದ್ಯಾಲಯ ನೂರಾರು ಮಕ್ಕಳಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನವನ್ನು ಯಶಸ್ವಿಯಾಗಿ ಬೋಧಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಕರಾವಳಿಯ ಯಕ್ಷಗಾನ ರಾಜಧಾನಿಯಲ್ಲಿ ಎಲ್ಲೆಡೆ ವಿಜೃಂಬಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಎಪಿಎಸ್‌ ಪಬ್ಲಿಕ್‌ ಸ್ಕೂಲ್‌ ಪ್ರಾಂಶುಪಾಲೆ ಶಾಲಿನಿ ಜಗದೀಶ್‌ ಮಾತನಾಡಿ, ಯಕ್ಷಗಾನ ನೋಡುವುದರಿಂದ, ಮಾಡುವುದರಿಂದ ಮನಸ್ಸಿಗೆ ಹಿತವಾಗುತ್ತದೆ ಎಂದು ನುಡಿದರು.
ಸೃಷ್ಟಿ ಕಲಾ ವಿದ್ಯಾಲಯ ಸ್ಥಾಪಕಾಧ್ಯಕ್ಷ ಛಾಯಾಪತಿ ಕಂಚಿಬೈಲ್‌, ಭಾಗವತ ಸುಬ್ರಾಯ ಹೆಬ್ಬಾರ್ ಇದ್ದರು.
ಅನಾರೋಗ್ಯ ನಿಮಿತ್ತ ಕಲಾವಿದ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಮನೆಯಲ್ಲಿಯೇ ಸೃಷ್ಟಿ ಕಲಾಭೂಷಣ ಪ್ರಶಸ್ತಿ ನೀಡಲಾಗುವುದು ಎಂದು ವಿದ್ಯಾಲಯದ ಅಧ್ಯಕ್ಷ ಛಾಯಪತಿ ಕಂಚಿಬೈಲ್‌ ತಿಳಿಸಿದರು. ಚೆಂಡೆವಾದಕ ಶ್ರೀನಿವಾಸ ಗುಂಡ ಇದ್ದರು. ಶ್ರೀನಿವಾಸ ಕೆಮ್ತೂರು ಕಾರ್ಯಕ್ರ ನಿರೂಪಿಸಿದರು.
ಯಕ್ಷಗಾನ ಪ್ರದರ್ಶನ: ಕಲಾವಿದ ನಿತ್ಯಾನಂದ ನಾಯಕ್‌ ಮಾರ್ಗದರ್ಶನದಲ್ಲಿ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ರಾಜ್‌ ಪರ್ಕಳ ನಿರ್ದೇಶನದಲ್ಲಿ ದ್ರೌಪದಿ ಪ್ರತಾಪ ಮತ್ತು ಶ್ವೇತಕುಮಾರ ಚರಿತ್ರೆ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು