2:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ಕಾಳಜಿ ಕೇಂದ್ರಕ್ಕೆ ತಹಶೀಲ್ದಾರ್ ಭೇಟಿ: ಸಂತ್ರಸ್ತರಿಗೆ ಆಳಲು ಆಲಿಕೆ; ಶೀಘ್ರ ಪರಿಹಾರದ ಭರವಸೆ

01/08/2021, 19:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಹಲ್ಯಾಳ ಗ್ರಾಮದ ಗಂಜಿ ಕೇಂದ್ರದಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಭಾನುವಾರ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್ ಭೇಟಿ ಮಾಡಿ ಜನರಿಗೆ ಶೀಘ್ರವೇ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕಣ್ಣ ಶೇಗುಣಸಿ ಮಾತನಾಡಿ, ಈಗಾಗಲೇ ನಮ್ಮ ಗ್ರಾಮ ಭಾಗಶಃ ಮುಳುಗಡೆಯಾಗಿದ್ದು ದಯವಿಟ್ಟು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಹಾಗೂ ಮುಖ್ಯಮಂತ್ರಿಗಳು ಇತ್ತಕಡೆ ಗಮನ ಹರಿಸಿ ನಮ್ಮ ಗ್ರಾಮವನ್ನು  ಸಂಪೂರ್ಣ ಮುಳುಗಡೆ ಗ್ರಾಮ ಘೋಷಿಸಿ ಶೀಘ್ರವೇ ಪರಿಹಾರ ಘೋಷಿಸಬೇಕು ಎಂದರು.

ನಂತರ ಮಾತನಾಡಿದ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಈಗಾಗಲೇ ಕಾಳಜಿ ಕೇಂದ್ರದಲ್ಲಿ ದನಗಳಿಗೆ ಮೇವು ಹಾಗೂ ಆಹಾರದ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ. ಆದಷ್ಟು ಬೇಗ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಾಗಿ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಮಣಿ, ವಿಠ್ಠಲ್ ಕಾಂಬಳೆ, ಶಶಿಕಾಂತ್ ದಳವಾಯಿ, ವಿಠ್ಠಲ್ ಮಂಗಸೂಳಿ, ನೋಡಲ್ ಅಧಿಕಾರಿ ನಟರಾಜ್ ಮದರಗಾಂವ, ಗ್ರಾಮ ಲೆಕ್ಕಾಧಿಕಾರಿ   ಶಿವಾನಂದ ಜಾಯಗೋಣಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು