8:38 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ಕಾಳಜಿ ಕೇಂದ್ರಕ್ಕೆ ತಹಶೀಲ್ದಾರ್ ಭೇಟಿ: ಸಂತ್ರಸ್ತರಿಗೆ ಆಳಲು ಆಲಿಕೆ; ಶೀಘ್ರ ಪರಿಹಾರದ ಭರವಸೆ

01/08/2021, 19:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಹಲ್ಯಾಳ ಗ್ರಾಮದ ಗಂಜಿ ಕೇಂದ್ರದಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಭಾನುವಾರ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್ ಭೇಟಿ ಮಾಡಿ ಜನರಿಗೆ ಶೀಘ್ರವೇ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕಣ್ಣ ಶೇಗುಣಸಿ ಮಾತನಾಡಿ, ಈಗಾಗಲೇ ನಮ್ಮ ಗ್ರಾಮ ಭಾಗಶಃ ಮುಳುಗಡೆಯಾಗಿದ್ದು ದಯವಿಟ್ಟು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಹಾಗೂ ಮುಖ್ಯಮಂತ್ರಿಗಳು ಇತ್ತಕಡೆ ಗಮನ ಹರಿಸಿ ನಮ್ಮ ಗ್ರಾಮವನ್ನು  ಸಂಪೂರ್ಣ ಮುಳುಗಡೆ ಗ್ರಾಮ ಘೋಷಿಸಿ ಶೀಘ್ರವೇ ಪರಿಹಾರ ಘೋಷಿಸಬೇಕು ಎಂದರು.

ನಂತರ ಮಾತನಾಡಿದ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಈಗಾಗಲೇ ಕಾಳಜಿ ಕೇಂದ್ರದಲ್ಲಿ ದನಗಳಿಗೆ ಮೇವು ಹಾಗೂ ಆಹಾರದ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ. ಆದಷ್ಟು ಬೇಗ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಾಗಿ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಮಣಿ, ವಿಠ್ಠಲ್ ಕಾಂಬಳೆ, ಶಶಿಕಾಂತ್ ದಳವಾಯಿ, ವಿಠ್ಠಲ್ ಮಂಗಸೂಳಿ, ನೋಡಲ್ ಅಧಿಕಾರಿ ನಟರಾಜ್ ಮದರಗಾಂವ, ಗ್ರಾಮ ಲೆಕ್ಕಾಧಿಕಾರಿ   ಶಿವಾನಂದ ಜಾಯಗೋಣಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು