11:54 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು