11:25 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು