2:31 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಯುವ ಮನಸ್ಸಿಗೆ ಬೆನ್ನುತಟ್ಟಿ ಪ್ರೋತ್ಸಾಹಿಸುವ ಪ್ರಥಮ ಚಿಕಿತ್ಸೆ ಹೆತ್ತವರಿಂದ ಸಿಗಬೇಕು: ಕೆನರಾ ಕಾಲೇಜು -ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಡಾ. ರಮೀಳಾ

08/11/2023, 23:43

ಮಂಗಳೂರು(reporterkarnataka.com): ಯುವ ಮನಸ್ಸಿಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದೇ ಮನೆಯಲ್ಲಿ ಹೆತ್ತವರಿಂದ ಸಿಗಬೇಕಾದ ಪ್ರಥಮ ಚಿಕಿತ್ಸೆ. ಮಕ್ಕಳ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆ ಇರಬೇಕು ಎಂದು ರೋಶನಿ ನಿಲಯದ ಸ್ನಾತಕೋತ್ತರ ವಿಭಾಗದ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಹೇಳಿದರು.


ಅವರು ಕೆನರಾ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳ ಹೆತ್ತವರ ಹಾಗೂ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿಗೆ ಕಾಲಿಟ್ಟಾಗ ವಿದ್ಯಾರ್ಥಿಗಳಿಗೆ ಸಿಗುವ ಹೊಸ ಸ್ವಾತಂತ್ರ್ಯ, ಅವಕಾಶ ಮತ್ತು ಮನೋಭಾವ ಎಲ್ಲವೂ ಈ ಹಂತದಲ್ಲಿ ಬದಲಾಗುತ್ತದೆ. ಸಂಬಂಧಗಳು ಗೆಳೆತನದಲ್ಲಿ ಮೌನಕ್ಕೆ ಶರಣಾಗುವವರಿದ್ದಾರೆ. ಅದು ಅವರ ವರ್ತನೆಯಿಂದ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಸಂಚಾಲಕ ಎಂ.ಜಗನ್ನಾಥ ಕಾಮತ್ ಅಧ್ಯಕ್ಷತೆ ವಹಿಸಿದ್ದು ಹೆತ್ತವರಿಗೆ ಮಕ್ಕಳು ಆಸ್ತಿ ಇದ್ದಂತೆ. ಅವರನ್ನು ಚೆನ್ನಾಗಿ ಬೆಳೆಸಬೇಕು. ಹೆತ್ತವರು ಕೇವಲ ಹಣ ಸಂಪಾದನೆಯಲ್ಲಿ ಇದ್ದಾಗ ಮಕ್ಕಳ ಕಡೆಗೆ ಗಮನ ಕಡಿಮೆಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲೆ ಡಾ.ಪ್ರೇಮಲತಾ ಪ್ರಸ್ತಾವಿಸಿದರು. ಕಾಲೇಜಿನ ವ್ಯವಸ್ಥಾಪಕರಾದ ಕೆ.ಶಿವಾನಂದ ಶೆಣೈ,ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್, ವಿಭಾಗಗಳ ಮುಖ್ಯಸ್ಥರುಗಳಾದ ದೇಜಮ್ಮ,
ಸಂಧ್ಯಾ ಬಿ., ಜಯ ಭಾರತಿ ಕೆ.ಪಿ. ಉಪಸ್ಥಿತರಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರತಿಭಾ ಬಾಳಿಗ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್. ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಸದಸ್ಯರನ್ನು ಈ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು