4:43 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಉಡುಪಿ ಸಂತೆಕಟ್ಟೆಯಲ್ಲಿ ಅಂಗಡಿಗಳಿಗೆ ದಾಳಿ: 81 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ; ದಂಡ ವಸೂಲಿ

09/11/2023, 21:40

ಉಡುಪಿ(reporterkarnataka.com): ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರಿಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಬೇಕು. ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು.
ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್‌ನವರು ಹಾಗೂ ಪೌರಕಾರ್ಮಿಕರು ಅನಿರೀಕ್ಷಿತ ದಾಳಿ ನಡೆಸುತ್ತಿದ್ದು, ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು