3:08 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಮಹಿಳೆಯರಿಗೆ ಸಮಾನತೆ ನೀಡುವ ದೇಶ ಪ್ರಗತಿ ಪಥದಲ್ಲಿ ಸಾಗುತ್ತದೆ: ಆಳ್ವಾಸ್ ನಲ್ಲಿ ಸಾಹಿತಿ ಡಾ. ವಸುಂಧರಾ ಭೂಪತಿ

09/11/2023, 21:52

ಮೂಡುಬಿದಿರೆ(reporterkarnataka.com): ಮಹಿಳೆಯರಿಗೆ ಸಮಾನತೆ ನೀಡುವ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತದೆ ಎಂದು ಬೆಂಗಳೂರಿನ ವೈದ್ಯೆ ಹಾಗೂ ಸಾಹಿತಿ ಡಾ. ವಸುಂಧರಾ ಭೂಪತಿ ಹೇಳಿದರು.
ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿ ಹಮ್ಮಿಕೊಂಡ ಮಹಿಳಾ ದೌರ್ಜನ್ಯ ತಡೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸಮಾಜ ಹೆಣ್ಣನ್ನು ಕೀಳರಿಮೆಯಿಂದ ನೋಡುತ್ತಿದೆ. ಅಂತಹ ತಾರತಮ್ಯ ಹೋಗಲಾಡಿಸಿ ಹೆಣ್ಣು ಗಂಡಿನಷ್ಟೆ ಸಮಾನಳು ಎಂಬ ಮನಸ್ಥಿತಿ ಸಮಾಜದಲ್ಲಿ ಮೂಡಬೇಕು.ಎಷ್ಟೋ ವಿಚಾರಗಳಲ್ಲಿ ಹೆಣ್ಣನ್ನು ತಪ್ಪು ಕಲ್ಪನೆಗಳಿಂದ ನೋಡುವುದಲ್ಲದೆ ಬಹಿಷ್ಕರಿಸುವ ಪದ್ದತಿಯನ್ನು ನಾವು ನೋಡುತ್ತಿದ್ದೇವೆ. ಆದರೆ ಅಂತಹ ತಪ್ಪಿನಲ್ಲಿ ಗಂಡಿನ ಪಾತ್ರವು ಇರುವುದೆಂದು ಯಾರು ಯೋಚಿಸುವುದಿಲ್ಲ. ದೌರ್ಜನ್ಯಕ್ಕೆ ಒಳಗಾದವರನ್ನು ಅನುಕಂಪದಿಂದ ನೋಡಬೇಕೆ ಹೊರತು ಬಹಿಷ್ಕರಿಸುವುದಲ್ಲ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಭಾರತಕ್ಕೆ ಸ್ವಾತಂತ್ರ‍್ಯ ಸಿಕ್ಕಿ ಇಷ್ಟು ವರ್ಷಗಳು ಕಳೆದರೂ ಕೂಡ ನಾವು ದೌರ್ಜನ್ಯದ ಪ್ರಕರಣಗಳನ್ನು ನೋಡುತ್ತಿದ್ದೆವೆ ಎಂದರೆ ನಾವು ಈಗಿನ ಸಮಾಜಕ್ಕಿಂತ ಹಿಂದಕ್ಕೆ ಹೋಗುತ್ತಿದ್ದೇವೆ ಎಂಬುದಲ್ಲ, ಹಿಂದಕ್ಕೆ ಓಡುತ್ತಿದ್ದೇವೆ ಎನ್ನುವುದಾಗಿದೆ ಎಂದು ಎಚ್ಚರಿಸಿದರು.
ಹೆಣ್ಣನ್ನು ಕೇವಲ ರೇಷನ್ ಕಾರ್ಡ್ ನಲ್ಲಿ ಮಾತ್ರ ಯಜಮಾನಿ ಎಂದು ಪರಿಗಣಿಸದೆ, ನಿಜ ಜೀವನದಲ್ಲೂ ಯಜಮಾನಿಯಾಗಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಜಾನ್ಸಿ ಪಿ.ಎನ್, ಸಂಯೋಜಕಿ ವಿದ್ಯಾ.ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕಿ ಡಾ.ಸುಲತಾ ಸ್ವಾಗತಿಸಿದರು. ಉಪನ್ಯಾಸಕಿ ಉಷಾ ಬಿ. ನಿರೂಪಿಸಿರು. ಉಪನ್ಯಾಸಕಿ ಆಶಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು