12:27 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ದುಶ್ಚಟಗಳಿಂದ ದೂರವಿದ್ದರೆ ಭವಿಷ್ಯ ಉಜ್ವಲ: ಮಾಣಿ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜಯಾನಂದ ಪೆರಾಜೆ

10/11/2023, 10:07

ಬಂಟ್ವಾಳ(reporterkarnataka.com): ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ.ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಶಿಕ್ಷಕ, ಪತ್ರಕರ್ತ
ಜಯಾನಂದ ಪೆರಾಜೆ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಡಾ. ಮನೋಹರ್ ರೈ ಶುಭ ಹಾರೈಸಿದರು.

ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಸಂಚಾಲಕ ಇಬ್ರಾಹಿಂ ಕೆ.ಮಾಣಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಎಸ್. ಚೆನ್ನಪ್ಪ ಗೌಡ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ, ಶ್ಯಾಮಲ ಕೆ.,ಸುಶ್ಮಿತಾ ಉಪಸ್ಥಿತರಿದ್ದರು. ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿದರು. ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿ, ಜಯರಾಮ ಕಾಂಚನ ನಿರೂಪಿಸಿದರು.ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು