6:06 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತೆ ಮೇಲುಗೈ: ವಿಜಯೇಂದ್ರ ರಾಜ್ಯ ಕಮಲ ಪಾಳಯದ ನೂತನ ಸಾರಥಿ

10/11/2023, 20:15

ಹೊಸದಿಲ್ಲಿ(reporterkarnataka.com): ಕಗ್ಗಂಟಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕೊನೆಗೂ ಸುಖಾಂತ್ಯ ಕಂಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು
ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯೇಂದ್ರ ಅವರ ನೇಮಕದ ಆದೇಶ ಹೊರಡಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಈ ಆಯ್ಕೆ ನಡೆಸಿದೆ.
ಬಿ.ವೈ. ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಪಕ್ಷದ ಕಾರ್ಯದಿಂದ ಯಡಿಯೂರಪ್ಪ ಅವರನ್ನು ಹೊರಗಿಟ್ಟ ಕಾರಣ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಮತ್ತೆ ಪ್ರವರ್ಧಮಾನಕ್ಕೆ ತರುವ ನಿಟ್ಟಿನಲ್ಲಿ ಅವರ ಪುತ್ರನ ಆಯ್ಕೆ ಮಾಡಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ. ಪುತ್ರ ರಾಜ್ಯಾಧ್ಯಕ್ಷರಾಗಿರುವುದರಿಂದ ಯಡಿಯೂರಪ್ಪ ಅವರು ಮತ್ತೆ ಸಕ್ರೀಯರಾಗಿ ಪಕ್ಷದ ಗೆಲುವಿಗೆ ಶ್ರಮಿಸುವರು ಎಂಬ ಲೆಕ್ಕಾಚಾರವನ್ನು ಬಿಜೆಪಿ ಹೈಕಮಾಂಡ್ ಮಾಡಿದೆ. ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಮೂಲೆಗೆ ತಳ್ಳುವ ನಿಟ್ಟಿನಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಅಷ್ಟೇನು ಪ್ರಾಮುಖ್ಯತೆ ಇಲ್ಲದ ಉಪಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರ ಅವರಿಗೆ ನೀಡಲಾಗಿತ್ತು.
ಇದೀಗ ವಿಜಯೇಂದ್ರ ಅವರ ಆಯ್ಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಮಾಹಿತಿ ನೀಡಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶದ ಮೇರೆಗೆ ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು