7:38 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಡೆಕ್ಕಲ್ : 25 ವರ್ಷಗಳ ಹಿಂದೆ ಮುಚ್ಚಿದ್ದ ಸರಕಾರಿ ಶಾಲೆ ಮತ್ತೆ ತೆರೆಯಲು ಗ್ರಾಮಸ್ಥರ ಒತ್ತಾಯ

01/08/2021, 19:33

ಮೂಡುಬಿದರೆ(reporterkarnataka.com): ಇಲ್ಲಿನ ಪಡುಮಾರ್ನಾಡು ಗ್ರಾಮದ ಡೆಕ್ಕಲ್ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಮುಚ್ಚಿ ಹೋಗಿ ಇದೀಗ ಪಳಿಯುಳಿಕೆ ಮಾತ್ರ ಉಳಿದಿರುವ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮತ್ತೆ ಪ್ರಾರಂಭಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರ ಸಭೆ ಭಾನುವಾರ ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ ಮತ್ತು ಶ್ರೀನಾಥ್ ಸುವರ್ಣ, ಸದಸ್ಯರಾದ ರಾಜೇಶ್ ಸುವರ್ಣ, ವಾಸುದೇವ ರಾವ್ ಸ್ಥಳೀಯರಾದ ಸೂರಜ್  ಜೈನ್ ಮಾರ್ನಾಡು, ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಶಾಲೆಯನ್ನು ಮತ್ತೆ ಪ್ರಾರಂಭಿಸುವ ಬಗ್ಗೆ ಸಮೂಹ ಸಂಪನ್ಮೂಲ ವ್ಯಕ್ತಿ  ಪ್ರಸನ್ನ ಶೆಣೈ ಅವರು ಇಲಾಖೆಯ ಮಾಹಿತಿಗಳನ್ನು ನೀಡಿದರು. ಈ ಸಾಲಿನಲ್ಲಿ ಶಾಲಾ ವಠಾರದಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭಿಸುವ ಬಗ್ಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ಗಳನ್ನು ಕೇಳಿಕೊಂಡು ಮುಂದಿನ ಸಾಲಿನಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಯಿತು. ಸ್ಥಳೀಯರಾದ ಪ್ರೌಢಶಾಲೆ ಅಧ್ಯಾಪಕ ಅಣ್ಣಿ ಎಂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು