6:30 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಡೆಕ್ಕಲ್ : 25 ವರ್ಷಗಳ ಹಿಂದೆ ಮುಚ್ಚಿದ್ದ ಸರಕಾರಿ ಶಾಲೆ ಮತ್ತೆ ತೆರೆಯಲು ಗ್ರಾಮಸ್ಥರ ಒತ್ತಾಯ

01/08/2021, 19:33

ಮೂಡುಬಿದರೆ(reporterkarnataka.com): ಇಲ್ಲಿನ ಪಡುಮಾರ್ನಾಡು ಗ್ರಾಮದ ಡೆಕ್ಕಲ್ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಮುಚ್ಚಿ ಹೋಗಿ ಇದೀಗ ಪಳಿಯುಳಿಕೆ ಮಾತ್ರ ಉಳಿದಿರುವ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮತ್ತೆ ಪ್ರಾರಂಭಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರ ಸಭೆ ಭಾನುವಾರ ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ ಮತ್ತು ಶ್ರೀನಾಥ್ ಸುವರ್ಣ, ಸದಸ್ಯರಾದ ರಾಜೇಶ್ ಸುವರ್ಣ, ವಾಸುದೇವ ರಾವ್ ಸ್ಥಳೀಯರಾದ ಸೂರಜ್  ಜೈನ್ ಮಾರ್ನಾಡು, ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಶಾಲೆಯನ್ನು ಮತ್ತೆ ಪ್ರಾರಂಭಿಸುವ ಬಗ್ಗೆ ಸಮೂಹ ಸಂಪನ್ಮೂಲ ವ್ಯಕ್ತಿ  ಪ್ರಸನ್ನ ಶೆಣೈ ಅವರು ಇಲಾಖೆಯ ಮಾಹಿತಿಗಳನ್ನು ನೀಡಿದರು. ಈ ಸಾಲಿನಲ್ಲಿ ಶಾಲಾ ವಠಾರದಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭಿಸುವ ಬಗ್ಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ಗಳನ್ನು ಕೇಳಿಕೊಂಡು ಮುಂದಿನ ಸಾಲಿನಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಯಿತು. ಸ್ಥಳೀಯರಾದ ಪ್ರೌಢಶಾಲೆ ಅಧ್ಯಾಪಕ ಅಣ್ಣಿ ಎಂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು