12:52 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಡೆಕ್ಕಲ್ : 25 ವರ್ಷಗಳ ಹಿಂದೆ ಮುಚ್ಚಿದ್ದ ಸರಕಾರಿ ಶಾಲೆ ಮತ್ತೆ ತೆರೆಯಲು ಗ್ರಾಮಸ್ಥರ ಒತ್ತಾಯ

01/08/2021, 19:33

ಮೂಡುಬಿದರೆ(reporterkarnataka.com): ಇಲ್ಲಿನ ಪಡುಮಾರ್ನಾಡು ಗ್ರಾಮದ ಡೆಕ್ಕಲ್ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಮುಚ್ಚಿ ಹೋಗಿ ಇದೀಗ ಪಳಿಯುಳಿಕೆ ಮಾತ್ರ ಉಳಿದಿರುವ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮತ್ತೆ ಪ್ರಾರಂಭಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರ ಸಭೆ ಭಾನುವಾರ ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ ಮತ್ತು ಶ್ರೀನಾಥ್ ಸುವರ್ಣ, ಸದಸ್ಯರಾದ ರಾಜೇಶ್ ಸುವರ್ಣ, ವಾಸುದೇವ ರಾವ್ ಸ್ಥಳೀಯರಾದ ಸೂರಜ್  ಜೈನ್ ಮಾರ್ನಾಡು, ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಶಾಲೆಯನ್ನು ಮತ್ತೆ ಪ್ರಾರಂಭಿಸುವ ಬಗ್ಗೆ ಸಮೂಹ ಸಂಪನ್ಮೂಲ ವ್ಯಕ್ತಿ  ಪ್ರಸನ್ನ ಶೆಣೈ ಅವರು ಇಲಾಖೆಯ ಮಾಹಿತಿಗಳನ್ನು ನೀಡಿದರು. ಈ ಸಾಲಿನಲ್ಲಿ ಶಾಲಾ ವಠಾರದಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭಿಸುವ ಬಗ್ಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ಗಳನ್ನು ಕೇಳಿಕೊಂಡು ಮುಂದಿನ ಸಾಲಿನಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಯಿತು. ಸ್ಥಳೀಯರಾದ ಪ್ರೌಢಶಾಲೆ ಅಧ್ಯಾಪಕ ಅಣ್ಣಿ ಎಂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು