6:15 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ವಸತಿ ಶಾಲೆ ವಿದ್ಯಾರ್ಥಿ ನಿಯರ ಮೇಲೆ ಲೈಂಗಿಕ ದೌರ್ಜನ್ಯ; ಅಮಲು ಬರುವ ಔಷಧ ನೀಡಿ ಅತ್ಯಾಚಾರ; 3 ಮಂದಿ ಬಂಧನ

11/11/2023, 10:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಸತಿ ಶಾಲೆಯ ವಿದ್ಯಾರ್ಥಿ ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಹಸಿಮಾಂಸದ ದಂಧೆಗೆ ದೂಡಿದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಶಿಕ್ಷಣ ಇಲಾಖೆಯೇ ತಲೆತಗ್ಗಿಸುವ ಘನಘೋರ ಕೃತ್ಯ ಇದಾಗಿದೆ.
ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಘಟನೆ ಸಂಬಂಧಿಸಿದಂತೆ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಸತಿ ಶಾಲೆಯ ಡಿ ದರ್ಜೆ ನೌಕರ ಸುರೇಶ್, ನರ್ಸ್ ಚಂದನಾ ಹಾಗೂ ನರ್ಸ್ ಪ್ರಿಯಕರ ವಿನಯ್ ಎಂದು ತಿಳಿದು ಬಂದಿದೆ.
ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ‌ವಿದೆ.
ತಿಂಗಳುಗಳಿಂದ ನಡೆಯುತ್ತಿರುವ ಕೃತ್ಯ ಇದಾಗಿದೆ ಪೊಲೀಸರ ತನಿಖೆಯಿಂದ ಬಯಲಾಗಿದೆ.
ಸುರೇಶ್ ಪ್ಯಾರಾ ಮೆಡಿಕಲ್ ಕೋರ್ಸ್‌ ಕೊಡಿಸುತ್ತೇನೆ ಎಂದು ಪುಸಲಾಯಿಸುತ್ತಿದ್ದ.
ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ. ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನ ಚಂದನಾ ಬಳಿ ಕಳಿಸುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನ ಅಲ್ಲೇ ಉಳಿಸಿಕೊಳ್ಳುತ್ತಿದ್ದಳು.
ಕಾಫಿ-ಟಿಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು.
ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು