11:55 AM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಾಜಿ ರಾಜ್ಯಪಾಲ ಉಡುಪಿಯ ಪಿ.ಬಿ. ಆಚಾರ್ಯ ಅಸ್ತಂಗತ: ಮುಂಬೈ ನಿವಾಸದಲ್ಲಿ ಕೊನೆಯುಸಿರೆಳೆದ ಕರಾವಳಿ ಕಣ್ಮಣಿ

11/11/2023, 11:39

ಮಂಗಳೂರು(reporterkarnataka.com): ನಾಗಾಲ್ಯಾಂಡ್ ಸೇರಿದಂತೆ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಮುಂಬಯಿ ನಿವಾಸದಲ್ಲಿ ಶುಕ್ರವಾರ ನಿಧನರಾದರು.
ಪಿ.ಬಿ. ಆಚಾರ್ಯ ಅವರು ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರು ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಉಡುಪಿಯಲ್ಲಿ ಬಾಲಕೃಷ್ಣ, ರಾಧಾ ಆಚಾರ್ಯ ದಂಪತಿ ಪುತ್ರನಾಗಿ ಪಿ.ಬಿ. ಆಚಾರ್ಯ ಅವರು 1931ರ ಅ.8ರಂದು ಜನಿಸಿದ್ದರು. ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್‌ನಲ್ಲಿ ಮೆಟ್ರಿಕ್ಯುಲೇಷನ್ ಶಿಕ್ಷಣ ಮುಗಿಸಿದ ಅವರು ಎಂಜಿಎಂ ಕಾಲೇಜಿನಲ್ಲಿ ಪದವಿ ಪಡೆದರು.
ಮುಂಬಯಿ ವಿವಿಯಲ್ಲಿ ಎಲ್‌ಎಲ್‌ಬಿ ಪದವಿ ಪಡೆದರು. ಮುಂಬಯಿ ವಿವಿಯ ಸೆನೆಟ್ ಸದಸ್ಯರಾಗಿದ್ದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಂಘ ಪರಿವಾರದ ಸಂಘಟನೆಗಳಲ್ಲಿ ಹಲವು ವರ್ಷ ಸಕ್ರಿಯರಾಗಿದ್ದ ಅವರು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಅಧ್ಯಯನ ಮಾಡಿದ್ದರು. ಉಡುಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅವರು ಅವರು ಮಂಗಳೂರಿನ ಜತೆಯೂ ನಿಕಟ ಬಾಂಧವ್ಯ ಇಟ್ಟುಕೊಂಡಿದ್ದರು. ಮಂಗಳೂರಿನ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಒತ್ತಿಕೊಂಡು ಅವರ ಪತ್ನಿಯ ತವರು ಮನೆ ಇದೆ. ರಾಜ್ಯಪಾಲರಾಗಿದ್ದ ವೇಳೆಯಲ್ಲೂ ಅವರು ಹಲವು ಬಾರಿ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಭೇಟಿ ಕೊಟ್ಟಿದ್ದರು. ಮಾಜಿ ಆದ ಬಳಿಕವೂ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಬಂದಿದ್ದರು. ರಾಜ್ಯಪಾಲರಾಗಿದ್ದಾಗ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಮೈದಾನದಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಸರಳ ವ್ಯಕ್ತಿತ್ವ ಆಚಾರ್ಯ ಅವರಿಗೆ ಮಕ್ಕಳು ಅಂದ್ರೆ ಅಚ್ಚುಮೆಚ್ಚು. ಮಕ್ಕಳಿಗೋಸ್ಕರವೇ ಜೇಬಿನಲ್ಲಿ ಚಾಕಲೇಟ್ ಇಟ್ಟುಕೊಳ್ಳುತ್ತಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು