11:21 AM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಆಂಬ್ಯುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ಫೈನ್

11/11/2023, 18:22

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದ್ರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ, ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ರು. ಆದ್ರೆ ಕೊಟ್ಟಿಗೆಹಾರ ಅಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.


ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು 7 ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ. ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ. ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500/- ಫೈನ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು