3:27 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಉಡುಪಿ: ಅಗಲಿದ ಪತ್ರಕರ್ತರಾದ ಶೇಖರ್ ಅಜೆಕಾರ್, ಶಶಿಧರ್ ಹೆಮ್ಮಣ್ಣಗೆ ನುಡಿನಮನ

11/11/2023, 23:28

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ಶೇಖರ್ ಅಜೆಕಾರ್ ಹಾಗೂ ಶಶಿಧರ್ ಹೆಮ್ಮಣ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬರಹದ ಹುಚ್ಚಿನ ದಾರಿಯ ಬದುಕು ಯಾವತ್ತೂ ಸುಲಭ ಅಲ್ಲ. ಬಹಳ ಸವಾಲು, ಸಂಕಷ್ಟ ಎದುರಿಸಿಯೇ ಮುಂದೆ ಹೆಜ್ಜೆ ಇಡಬೇಕಾಗುತ್ತದೆ. ಪತ್ರಕರ್ತರು ಸವಾಲುಗಳನ್ನು ಒಡ್ಡಿ ಸಮಾಜದ ಮುಂದೆ ತಮ್ಮನ್ನು ಗುರುತಿಸಿ ಕೊಳ್ಳುತ್ತಾರೆ. ಹಾಗಾಗಿ ಬರಹದ ಹುಚ್ಚಿನಿಂದ ಪತ್ರಕರ್ತ ವ್ಯಕ್ತಿಯಾಗಿ ಬೆಳೆಯ ಬಹುದೇ ಹೊರತು ಆರ್ಥಿಕವಾಗಿ ಬೆಳೆಯುವುದು ಕಷ್ಟ ಎಂದು ಹೇಳಿದರು.
ಶೇಖರ್ ಅಜೆಕಾರು ಸಾಮಾಜಿಕ ಬದುಕಿನಲ್ಲಿ ಆಳವಾದ ಅಧ್ಯಯನ ಮಾಡಿದ್ದಾರೆ. ಶಶಿಧರ್ ಹೆಮ್ಮಣ್ಣ ಅವರ ಬರವಣಿಗೆ ವಾಸ್ತವ್ಯ ಸ್ಥಿತಿಗೆ ಬಹಳಷ್ಟು ಹತ್ತಿರವಾಗಿರುತ್ತದೆ. ಇಬ್ಬರದ್ದು ಸಾಯುವ ವಯಸ್ಸು ಅಲ್ಲ. ಇನ್ನಷ್ಟು ವರ್ಷ ಬದುಕಲು ಬೇಕಾದ ಅವಕಾಶಗಳು ಇರುತ್ತಿತ್ತು. ಎಲ್ಲರ ಒಳಗೊಂಡ ಸಾಮಾಜ ಕಟ್ಟು ಅವರ ಕಲ್ಪನೆಗೆ ಇನ್ನಷ್ಟು ಶಕ್ತಿ ಬರುತ್ತಿತ್ತು ಎಂದರು.
ಉಡುಪಿ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಾಜಿ ಅಧ್ಯಕ್ಷ ಗೋಕುಲ್‌ದಾಸ್ ಪೈ, ಹಿರಿಯ ಉಪಸಂಪಾದಕ ಕರುಣಾಕರ್, ಪತ್ರಕರ್ತರಾದ ದೀಪಕ್ ಜೈನ್, ಶಶಿಧರ್ ಮಾಸ್ತಿಬೈಲು ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಪತ್ರಿಕಾ ಭವನ ಸಂಚಾಲಕ ಅಜಿತ್ ಅರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ, ಉತ್ತರ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಶಿವಕುಮಾರ್, ಕೆಮ್ಮಣ್ಣು, ಗ್ರಾಪಂ ಕಾರ್ಯದರ್ಶಿ ದಿನಕರ ಬೆಂಗ್ರೆ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು