8:30 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಲ್ಪೆ: ತಾಯಿ- ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿಯ ಭೀಕರ ಕೊಲೆ; ಇನ್ನೊಬ್ಬರು ಗಂಭೀರ

12/11/2023, 18:38

ಉಡುಪಿ(reporterkarnataka.com): ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉಡುಪಿ ಸಾಕ್ಷಿಯಾಗಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ಇಲ್ಲಿನ
ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿದೆ.

ಕೊಲೆಗೀಡಾದವರನ್ನು ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಎಂದು ಗುರುತಿಸಲಾಗಿದೆ. ಇನ್ನೋರ್ವ ವೃದ್ಧ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ.
ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ. ಕೆ ಅರುಣ್, ಡಿವೈಎಸ್ಪಿ ದಿನಕರ್ ಹಾಗೂ ಮಲ್ಪೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಎಸ್ಪಿ ಡಾ. ಅರುಣ್ ಕೆ ನೇಜಾರಿನ ಸಮೀಪಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಲೆ ಮಾಡಲಾಗಿದೆ. ಇನ್ನೊಬ್ಬರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಹಸೀನಾ ಮತ್ತವರ ಮೂವರು ಮಕ್ಕಳನ್ನು ಕೊಲೆ ಮಾಡಲಾಗಿದೆ. ನಾವು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು ತನಿಖೆ ಮಾಡಿ ಶೀಘ್ರ ಇದರ ಹಿಂದಿನ ಕಾರಣ ಪತ್ತೆ ಹಚ್ಚುತ್ತೇವೆ . ಸದ್ಯ ಮನೆಯೊಳಗೆ ಯಾವುದೇ ಸೊತ್ತುಗಳು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಬೆಳಿಗ್ಗೆ ಹತ್ತು ಗಂಟೆ ಹೊತ್ತಿಗೆ ನಮಗೆ ಮಾಹಿತಿ ಬಂದಿದ್ದು, ಮಾಹಿತಿ ಬಂದ ತಕ್ಷಣ ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದೇವೆ. ಕೊಲೆಗೆ ಏನು ಕಾರಣ ಎಂದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು