10:39 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮಲ್ಪೆ: ತಾಯಿ- ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿಯ ಭೀಕರ ಕೊಲೆ; ಇನ್ನೊಬ್ಬರು ಗಂಭೀರ

12/11/2023, 18:38

ಉಡುಪಿ(reporterkarnataka.com): ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉಡುಪಿ ಸಾಕ್ಷಿಯಾಗಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ಇಲ್ಲಿನ
ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿದೆ.

ಕೊಲೆಗೀಡಾದವರನ್ನು ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಎಂದು ಗುರುತಿಸಲಾಗಿದೆ. ಇನ್ನೋರ್ವ ವೃದ್ಧ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ.
ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ. ಕೆ ಅರುಣ್, ಡಿವೈಎಸ್ಪಿ ದಿನಕರ್ ಹಾಗೂ ಮಲ್ಪೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಎಸ್ಪಿ ಡಾ. ಅರುಣ್ ಕೆ ನೇಜಾರಿನ ಸಮೀಪಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಲೆ ಮಾಡಲಾಗಿದೆ. ಇನ್ನೊಬ್ಬರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಹಸೀನಾ ಮತ್ತವರ ಮೂವರು ಮಕ್ಕಳನ್ನು ಕೊಲೆ ಮಾಡಲಾಗಿದೆ. ನಾವು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು ತನಿಖೆ ಮಾಡಿ ಶೀಘ್ರ ಇದರ ಹಿಂದಿನ ಕಾರಣ ಪತ್ತೆ ಹಚ್ಚುತ್ತೇವೆ . ಸದ್ಯ ಮನೆಯೊಳಗೆ ಯಾವುದೇ ಸೊತ್ತುಗಳು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಬೆಳಿಗ್ಗೆ ಹತ್ತು ಗಂಟೆ ಹೊತ್ತಿಗೆ ನಮಗೆ ಮಾಹಿತಿ ಬಂದಿದ್ದು, ಮಾಹಿತಿ ಬಂದ ತಕ್ಷಣ ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದೇವೆ. ಕೊಲೆಗೆ ಏನು ಕಾರಣ ಎಂದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು