9:45 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಉಡುಪಿ: ಒಂದೇ ಕುಟುಂಬದ 4 ಮಂದಿಯ ಹತ್ಯೆ; ಒಬ್ಬಳ ಮೇಲಿನ ದ್ವೇಷಕ್ಕೆ ಹಂತಕ ನಾಲ್ವರು ಬಲಿ ಪಡೆದನೇ?

13/11/2023, 19:41

ಉಡುಪಿ(reporterkarnataka.com): ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಒಬ್ಬಳ ಕೊಲೆ ನಡೆಸುವುದಕ್ಕಾಗಿ ಜತೆಗೆ ಮತ್ತೆ ಮೂವರ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿತ್ತು. ತಾಯಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂಬವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಂತಕನು
ಒಬ್ಬಳ ಮೇಲಿನ ದ್ವೇಷದಿಂದ ಆಕೆಯನ್ನು ಕೊಲ್ಲಲ್ಲು ಬಂದರೂ ಸಾಕ್ಷ್ಮಿ ಉಳಿಯದಂತೆ ಮತ್ತೆ ಮೂವರನ್ನು ಕೊಂದಿದ್ದಾನೆ ಎನ್ನಲಾಗಿದೆ. ವೃದ್ಧೆಗೂ ಚಾಕು ಇರಿದರೂ ಅವರು ಓಡಿ ತಪ್ಪಿಸಿಕೊಂಡು ಬಚಾವ್ ಆಗಿದ್ದರು.
ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಫ್ನಾನ್ ಮೇಲಿನ ದ್ವೇಷಕ್ಕೆ ದುಷ್ಕರ್ಮಿ ಇನ್ನೂ ಮೂವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಂತಕನನ್ನು ಘಟನೆ ನಡೆದ ಮನೆಗೆ ಕರೆತಂದ ಆಟೋ ಡ್ರೈವರ್ ಈಗಾಗಲೇ ಕೊಲೆಗಡುಕನ ಕುರಿತು ಮಾಹಿತಿ ನೀಡಿದ್ದಾರೆ. ಪಾತಕಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು