10:25 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಡಿ. 28: ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಕುದ್ರೋಳಿ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ

13/11/2023, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಡಿ.28ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಹೇಳಿದರು.
ಅವರು ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಲೆನಾಡಿನ ಭಾಗದಲ್ಲಿ ಹಿಂದು ಬಡ ಕುಟುಂಬದ ವಧುವರರಿಗೆ ವಿವಾಹ ಮಾಡಲು ಟ್ರಸ್ಟ್ ಮುಂದೆ ಬಂದಿದ್ದು, 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಿದ್ದೇವೆ. ಈಗಾಲೇ 5 ಜೋಡಿಗಳು ಸಾಮೂಹಿಕವಾಗಿ ವಿವಾಹವಾಗಲು ಮುಂದೆ ಬಂದಿವೆ. ಇನ್ನೂ 7 ಜೋಡಿಗಳ ಅವಶ್ಯಕತೆಯಿದೆ. ಅದಲ್ಲದೇ ಮೂರು ಆಸಕ್ತ ಬಡ ಕುಟುಂಬಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದೇವೆ. ಸಂಘಟನೆ ವತಿಯಿಂದ ನೂತನ ವಧುವರರಿಗೆ ಒಂದು ಪವನ್ ಚಿನ್ನದ ಕರಿಮಣಿ ಮತ್ತು ಉಡುಪುಗಳನ್ನು ನೀಡಲಾಗುವುದು’ಎಂದರು. ಅಖಿಲ ಕರ್ನಾಟಕ ರಾಜ ಕೇಸರಿ ಸಂಸ್ಥೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಷನ್ ಸಿಕ್ವೇರಾ ಮಾತನಾಡಿ ‘ ನಮ್ಮ ಟ್ರಸ್ಟ್ ನಿಂದ ಕೊರೋನಾ ಸಮಯದಲ್ಲಿ 85 ಶವ ಸಂಸ್ಕಾರ, ಒಂದೇ ದಿನದಲ್ಲಿ 500 ನೇತ್ರ ನೋಂದಾವಣೆ, ಸೂರು ಇಲ್ಲದವರಿಗೆ 34 ಮನೆಗಳಿಗೆ ಆಸರೆ ನೀಡಿದ್ದೇವೆ. ಅನಾರೋಗ್ಯ ಪೀಡಿತರಿಗೆ ಸಹಾಯಾಸ್ತ ಮಾಡಿದ್ದೇವೆ. ವಿವಿಧ ಕ್ಷೇತ್ರದಲ್ಲಿ ನಮ್ಮ ಸಂಸ್ಥೆಯಿಂದ ಸಾಮಾಜಿಕ ಸೇವೆ ನೀಡಿದ್ದೇವೆ’ ಎಂದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಂಜಯ್ ಗೌಡ ಮಾತನಾಡಿ ‘ಮಲೆನಾಡಿನ ಬಡ ಹಿಂದು ಯುವಕರಿಗೆ ನೆರವಾಗಲು ಈ ಸಂಸ್ಥೆ ಮುಂದೆ ಬಂದಿದೆ.ನಮ್ಮ ಮಲೆನಾಡಿನ ಯುವಕರು ಸಾಮೂಹಿಕವಾಗಿ ವಿವಾಹವಾಗಲು ಯೋಚಿಸಿದ್ದರೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9686714110/9901947498 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು
ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು