4:49 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ವಿಜಯೇಂದ್ರ ದಂಡಯಾತ್ರೆ ಆರಂಭ: ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಎಸ್.ಎಂ. ಕೃಷ್ಣ, ಬೊಮ್ಮಾಯಿ ಸಹಿತ ಸಾಲು ಸಾಲು ನಾಯಕರ ಭೇಟಿ

13/11/2023, 22:25

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ತನ್ನ ದಂಡಯಾತ್ರೆಯನ್ನು ಶುರು ಮಾಡಿ ಬಿಟ್ಟಿದ್ದಾರೆ. ರಾಜ್ಯದ ಹಿರಿಯ ನಾಯಕರನ್ನು ಸಾಲು ಸಾಲಾಗಿ ಅವರು ಭೇಟಿಯಾಗಿದ್ದಾರೆ.


ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಮಾಜಿ ಪ್ರಧಾನಿಯ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಬೇಡಿದ್ದಾರೆ.
ಈ ವೇಳೆ ದೇವೇಗೌಡ ಅವರು ಪ್ರೀತಿಯಿಂದ ಮೈ ಸವರಿದ್ದಾರೆ.
ಶಾಲು ಹೊದೆಸಿ ಸನ್ಮಾನಿಸಿ ಶುಭ ಹಾರೈಸಿದ್ದಾರೆ. ಇದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’ ನನ್ನಂಥವರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ ಎಂದು ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದಾರೆ. ಶಾಸಕರಾದ ಎಂ.ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದ ಪ್ರಜ್ವಲ್ ರೇವಣ್ಣ ಅವರು, ಉಪಸ್ಥಿತರಿದ್ದರು.
ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ, ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರನ್ನು ಕೂಡ ಭೇಟಿಯಾಗಿದ್ದಾರೆ. ಎಸ್.ಎಂ. ಕೃಷ್ಣ ಅವರ ಮನೆಗೆ ತೆರಳಿದ ವಿಜಯೇಂದ್ರ ಅವರು ಅಲ್ಲಿಯೂ ಕೃಷ್ಣ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ಕೆಲವು ಸ್ವಪಕ್ಷೀಯ ನಾಯಕರ ಅಸಮಾಧಾನದ ನಡುವೆ ವಿಜಯೇಂದ್ರ ಅವರು ದಿಗ್ವಿಜಯ ಯಾತ್ರೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು