9:45 AM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ನೇಜಾರು ಒಂದೇ ಕುಟುಂಬದ 4 ಮಂದಿಯ ಭೀಕರ ಹತ್ಯಾಕಾಂಡ: ಪ್ರತ್ಯಕ್ಷದರ್ಶಿ ಗಾಯಾಳು ಮಹಿಳೆ ಆಸ್ಪತ್ರೆಯಿಂದ ಬಿಡುಗಡೆ

14/11/2023, 15:06

ಉಡುಪಿ(reporterkarnataka.com): ಇಲ್ಲಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯಾಕಾಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ಮಹಿಳೆ ಮಂಗಳವಾರ ಬಿಡುಗಡೆಗೊಂಡಿದ್ದಾರೆ.
ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಸಾವನ್ನಪ್ಪಿದ ನಾಲ್ವರಲ್ಲಿ ಹಸೀನಾ ಅವರ ಅತ್ತೆಯಾದ ಹಾಜಿರಾ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಹಂತಕ ನಾಲ್ವರನ್ನು ಕೊಂದ ಬಳಿಕ ಹಾಜಿರಾ ಅವರ ಮೇಲೆಯೂ ಚಾಕುವಿನಿಂದ ದಾಳಿ ನಡೆಸಿದ್ದ. ಗಾಯಗೊಂಡ ಹಾಜಿರಾ ಅವರು ತಪ್ಪಿಸಿಕೊಂಡು ಓಡಿ ಹೋಗಿ ಬಾತ್ ರೂಮ್ ನಲ್ಲಿ ಅಡಗಿ ಕುಳಿತಿದ್ದರು. ಈ ಭೀಕರ ಹತ್ಯಾಕಾಂಡದ ಪ್ರತ್ಯಕ್ಷದರ್ಶಿ ಇವರಾಗಿದ್ದಾರೆ.
ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹಾಜಿರಾ ಅವರನ್ನು ಇದೀಗ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಎರಡು ಕಡೆ ಚಾಕು ಇರಿತಕ್ಕೊಳಗಾದ ಹಾಜಿರಾ ಅವರಿಗೆ ವೈದ್ಯರು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು