3:29 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟ ರಚನೆಗೆ ಆ. 5ರಂದು ಮುಹೂರ್ತ ಫಿಕ್ಸ್?: ದ.ಕ.ಜಿಲ್ಲೆಯಿಂದ ಅಂಗಾರರಿಗೆ ಮತ್ತೆ ಸಚಿವ ಸ್ಥಾನ? 

01/08/2021, 21:06

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಚೊಚ್ಚಲ ಸಂಪುಟ ಆ. 5ರಂದು ಬಹುತೇಕ ರಚನೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಎಸ್. ಅಂಗಾರ ಅವರಿಗೆ ಮತ್ತೆ ಸಚಿವ ಪದವಿ ದೊರೆಯುವುದು ನಿಚ್ಚಳವಾಗಿದೆ. ಅದೇ ರೀತಿ ನೆರೆಯ ಉಡುಪಿ ಜಿಲ್ಲೆಯಿಂದ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ.

ಬೊಮ್ಮಾಯಿ ಸಂಪುಟದಲ್ಲಿ ಮೂವರು ಡಿಸಿಎಂಗಳಿರುತ್ತಾರೆ. ಆರ್. ಅಶೋಕ್, ಗೋವಿಂದ ಕಾರಜೋಳ ಹಾಗೂ ಶ್ರೀರಾಮುಲು ಅವರಿಗೆ ಡಿಸಿಎಂ ಪಟ್ಟ ಒಲಿಯುವ ಸಾಧ್ಯತೆಗಳಿವೆ. ಸಂಘ ಪರಿವಾರದಿಂದ ಬಂದ, ಹಿರಿತನಕ್ಕೆ ಹೆಸರಾದ ಎಸ್ .ಅಂಗಾರ ಅವರಿಗೆ ಮತ್ತೊಮ್ಮೆ ಅವಕಾಶ ಲಭಿಸಲಿದೆ. ಸುರೇಶ್ ಕುಮಾರ್, ಮುರುಗೇಶ್ ನಿರಾಣಿ ಮತ್ತೆ ಮಂತ್ರಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ. ಹೊಸ ಮುಖಗಳಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಶಾಸಕ ಸುನಿಲ್ ಕುಮಾರ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೊಡಗಿನ ಅಪ್ಪಚ್ಚು ರಂಜನ್, ಮೂಡುಗೆರೆಯ ಕುಮಾರಸ್ವಾಮಿ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನಿಂದ ಈ ಬಾರಿ ಎ. ರಾಮದಾಸ್ ಸಚಿವ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು