12:03 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಉಡುಪಿ ಸಮೀಪ ಒಂದೇ ಕುಟುಂಬದ 4 ಮಂದಿ ಹತ್ಯೆ ಪ್ರಕರಣ: ಬೆಳಗಾವಿ ಬಳಿ ಆರೋಪಿ ಬಂಧನ; ಮಂಗಳೂರು ಏರ್ ಫೋರ್ಟ್ ನಲ್ಲಿ ಕೆಲಸಕ್ಕಿದ್ದನೇ ಈತ?

14/11/2023, 20:02

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ಬಂಧಿಸಿದ್ದಾರೆ‌.
ಬಂಧಿತ ಆರೋಪಿಯನ್ನು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸಕ್ಕಿದ್ದ. ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ ಎನ್ನಲಾಗಿದೆ.
ಆರೋಪಿಯು ನೇಜಾರಿನ ತೃಪ್ತಿ ನಗರ ಬಡಾವಣೆಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದ. ಕೇವಲ 15 ನಿಮಿಷದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದನು.
ಹತ್ಯೆ ನಡೆಸಿದ ನಂತರ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಮಂಗಳವಾರ ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಈ ವೇಳೆ ಆರೋಪಿಯನ್ನು
ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು