3:45 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತರೀಕೆರೆ: ಮನೆಯೊಳಗೆ ಪಟಾಕಿ ಸಿಡಿದು ಯುವಕ ಸಾವು: 4 ಮಂದಿಗೆ ಗಾಯ; ಓರ್ವ ಗಂಭೀರ

15/11/2023, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯ ಮನೆಯೊಂದರಲ್ಲಿ ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತ ಯುವಕನನ್ನು ಪ್ರದೀಪ್ (30) ಎಂದು ಗುರುತಿಸಲಾಗಿದೆ. ಚೇರ್ ಕೆಳಗೆ ಪಟಾಕಿ ಇಟ್ಟುಕೊಂಡು ಯುವಕ ಕೂತಿದ್ದ. ಪಟಾಕಿ ಸಿಡಿದ ರಭಸಕ್ಕೆ ಯುವಕ ನೆಲದಿಂದ 5 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದ. ಕಲ್ಲು ಆಟಂಬಾಂಬ್ ಪಟಾಕಿಯನ್ನು ಚೇರ್ ಕೆಳಗೆ ಇಟ್ಟುಕೊಂಡು ಪ್ರದೀಪ್ ಕುಳಿತಿದ್ದ. ಪಟಾಕಿ ಕಿಡಿ ತಾಗಿ ಚೀಲದಲ್ಲಿದ್ದ ಅಡಿಕೆಗೋಟು ಪಟಾಕಿಗಳು ಬ್ಲಾಸ್ಟ್ ಆಗಿವೆ. ದೇಹದ ಸೂಕ್ಷ್ಮ ಜಾಗಕ್ಕೆ ಗಂಭೀರ ಗಾಯಗಳಾಗಿ ಪ್ರದೀಪ್ ಮೃತಪಟ್ಟಿದ್ದಾರೆ.
ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ.
ಮೂವರು ಮಕ್ಕಳಿಗೂ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲು ಆಟಂಬಾಂಬ್ ಸಿಡಿದ ರಭಸಕ್ಕೆ ಮನೆಯ ಗ್ಲಾಸ್ ಗಳು ಪುಡಿ-ಪುಡಿಯಾಗಿವೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು