3:46 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ತರೀಕೆರೆ: ಮನೆಯೊಳಗೆ ಪಟಾಕಿ ಸಿಡಿದು ಯುವಕ ಸಾವು: 4 ಮಂದಿಗೆ ಗಾಯ; ಓರ್ವ ಗಂಭೀರ

15/11/2023, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯ ಮನೆಯೊಂದರಲ್ಲಿ ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತ ಯುವಕನನ್ನು ಪ್ರದೀಪ್ (30) ಎಂದು ಗುರುತಿಸಲಾಗಿದೆ. ಚೇರ್ ಕೆಳಗೆ ಪಟಾಕಿ ಇಟ್ಟುಕೊಂಡು ಯುವಕ ಕೂತಿದ್ದ. ಪಟಾಕಿ ಸಿಡಿದ ರಭಸಕ್ಕೆ ಯುವಕ ನೆಲದಿಂದ 5 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದ. ಕಲ್ಲು ಆಟಂಬಾಂಬ್ ಪಟಾಕಿಯನ್ನು ಚೇರ್ ಕೆಳಗೆ ಇಟ್ಟುಕೊಂಡು ಪ್ರದೀಪ್ ಕುಳಿತಿದ್ದ. ಪಟಾಕಿ ಕಿಡಿ ತಾಗಿ ಚೀಲದಲ್ಲಿದ್ದ ಅಡಿಕೆಗೋಟು ಪಟಾಕಿಗಳು ಬ್ಲಾಸ್ಟ್ ಆಗಿವೆ. ದೇಹದ ಸೂಕ್ಷ್ಮ ಜಾಗಕ್ಕೆ ಗಂಭೀರ ಗಾಯಗಳಾಗಿ ಪ್ರದೀಪ್ ಮೃತಪಟ್ಟಿದ್ದಾರೆ.
ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ.
ಮೂವರು ಮಕ್ಕಳಿಗೂ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲು ಆಟಂಬಾಂಬ್ ಸಿಡಿದ ರಭಸಕ್ಕೆ ಮನೆಯ ಗ್ಲಾಸ್ ಗಳು ಪುಡಿ-ಪುಡಿಯಾಗಿವೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು