12:58 PM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮ್ಯಾದರಾಳ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ: ಶಾಸಕ ತುರುವಿಹಾಳರಿಂದ ಬೋರ್ ವೆಲ್ ಕೊಡುಗೆ

02/08/2021, 09:08

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದ ಮಸ್ಕಿ ತಾಲೂಕಿನ ಮ್ಯಾದರಾಳ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೂತನ ಶಾಸಕ ಬಸವನ ಗೌಡ ತುರುವಿಹಾಳ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಗ್ರಾಮದಲ್ಲಿ ಬೋರ್ ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ.

ಮ್ಯಾದರಾಳದ ಗ್ರಾಮಸ್ಥರು ಕುಡಿಯಲು ಸರಿಯಾದ ನೀರಿನ ವ್ಯವಸ್ಥೆ ಇಲ್ಲದೆ ಹಲವು ವರ್ಷಗಳಿಂದ ತತ್ತರಿಸಿ ಹೋಗಿದ್ದರು. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿದ್ದರು. ಆದರೂ ವಾರದಲ್ಲಿ 2 ಅಥವಾ 4 ಬಾರಿ ಮಾತ್ರ ನೀರು ಬರುತ್ತಿದ್ದವು. ಆದರೆ ಇದನ್ನು

ಅರಿತ ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ಆ ಗ್ರಾಮಕ್ಕೆ ಸಾರ್ವಜನಿಕರಿಗಾಗಿ ಬೋರ್ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದಿದೆ. ಗ್ರಾಮದ ಜನರು ಖುಷಿ ಹರ್ಷ ವ್ಯಕ್ತಪಡಿಸಿದ್ದಾರೆ. ಎಷ್ಟೋ ವರ್ಷದ ಕನಸು ಈಗ ನನಸಾಗೋ ಭಾಗ್ಯ ನಮ್ಮ ಗ್ರಾಮಕ್ಕೆ ಬಂದಿದೆ. 

ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಸಹೋದರ ಸಿದ್ದನಗೌಡ ಅಭಿಮಾನಿಗಳು,

ಸಣ್ಣ ಹನುಮನಗೌಡ, ಅಂಬರೀಶ್ ದೇವರಮನೆ, ವೆಂಕಣ್ಣ ಕಳಮಳ್ಳಿ, ನರಸನಗೌಡ, ಹನುಮಣ್ಣ ವಾಟರ್ ಮ್ಯಾನ್, ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿ ವೆಂಕನಗೌಡ ದೇವರು ಮನೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು