12:59 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮ್ಯಾದರಾಳ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ: ಶಾಸಕ ತುರುವಿಹಾಳರಿಂದ ಬೋರ್ ವೆಲ್ ಕೊಡುಗೆ

02/08/2021, 09:08

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದ ಮಸ್ಕಿ ತಾಲೂಕಿನ ಮ್ಯಾದರಾಳ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೂತನ ಶಾಸಕ ಬಸವನ ಗೌಡ ತುರುವಿಹಾಳ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಗ್ರಾಮದಲ್ಲಿ ಬೋರ್ ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ.

ಮ್ಯಾದರಾಳದ ಗ್ರಾಮಸ್ಥರು ಕುಡಿಯಲು ಸರಿಯಾದ ನೀರಿನ ವ್ಯವಸ್ಥೆ ಇಲ್ಲದೆ ಹಲವು ವರ್ಷಗಳಿಂದ ತತ್ತರಿಸಿ ಹೋಗಿದ್ದರು. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿದ್ದರು. ಆದರೂ ವಾರದಲ್ಲಿ 2 ಅಥವಾ 4 ಬಾರಿ ಮಾತ್ರ ನೀರು ಬರುತ್ತಿದ್ದವು. ಆದರೆ ಇದನ್ನು

ಅರಿತ ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ಆ ಗ್ರಾಮಕ್ಕೆ ಸಾರ್ವಜನಿಕರಿಗಾಗಿ ಬೋರ್ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದಿದೆ. ಗ್ರಾಮದ ಜನರು ಖುಷಿ ಹರ್ಷ ವ್ಯಕ್ತಪಡಿಸಿದ್ದಾರೆ. ಎಷ್ಟೋ ವರ್ಷದ ಕನಸು ಈಗ ನನಸಾಗೋ ಭಾಗ್ಯ ನಮ್ಮ ಗ್ರಾಮಕ್ಕೆ ಬಂದಿದೆ. 

ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಸಹೋದರ ಸಿದ್ದನಗೌಡ ಅಭಿಮಾನಿಗಳು,

ಸಣ್ಣ ಹನುಮನಗೌಡ, ಅಂಬರೀಶ್ ದೇವರಮನೆ, ವೆಂಕಣ್ಣ ಕಳಮಳ್ಳಿ, ನರಸನಗೌಡ, ಹನುಮಣ್ಣ ವಾಟರ್ ಮ್ಯಾನ್, ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿ ವೆಂಕನಗೌಡ ದೇವರು ಮನೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು