11:20 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ

16/11/2023, 21:12

ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರಾಟ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಹಿಂದೂ ಕುಟುಂಬಗಳಿಗೆ ಅದರಲ್ಲೂ ಅಪ್ರಾಪ್ತ ಹಿಂದೂ ಯುವತಿಯನ್ನು ಅನ್ಯಮತೀಯ ಪುಸಲಾಯಿಸಿ ಜೀವನ ಹಾಳು ಮಾಡುವುದನ್ನು ತಡೆದ ನಾಲ್ವರು ಹಿಂದೂ ಯವ ಕಾರ್ಯಕರ್ತರ ಮೇಲೆ ಅಪಹರಣ ಕೇಸು ದಾಖಲು ಮಾಡಿ ಪೊಲೀಸ್ ಇಲಾಖೆ ಮೂಲಕ ದಬ್ಬಾಳಿಕೆ ಮಾಡುತ್ತಿದೆ.
ಹಿಂದೂ ಯುವತಿಯರ ನೆರವಿಗೆ ಬರುವ ಹಿಂದೂ ಕಾರ್ಯಕರ್ತರನ್ನು ಕ್ರಿಮಿನಲ್ ಗಳಂತೆ ಕಾಂಗ್ರೆಸ್ ಸರಕಾರ ನೋಡುತ್ತಿದೆ.
ಹಿಂದೂ ಮುಖಂಡರು, ಕಾರ್ಯಕರ್ತರು ಕಾರಣವಿಲ್ಲದೆ ಯಾರದೇ ತಂಟೆಗೆ ಹೋಗುವುದಿಲ್ಲ.ಆದರೆ ಹಿಂದೂ ಸಮಾಜದ ಅಸ್ಮಿತೆಗೆ ದಕ್ಕೆ ಬಂದಾಗ ಹೋರಾಟ ಮಾಡುತ್ತಾರೆ.ಪೊಲೀಸ್ ಠಾಣೆಯಲ್ಲಿ ಈ ಮೂಲಕ ದಾಖಲಾದ ಸಣ್ಣಪುಟ್ಟ ಕೇಸ್ ಆಧಾರವಾಗಿಸಿ ಗಡಿಪಾರು ಆದೇಶ ಮಾಡುವುದನ್ನು ನೋಡಿದರೆ ಹಿಂದೂ ಸಂಘಟನೆಗಳ ಬಗ್ಗೆ ಸರಕಾರಕ್ಕೆ ಭೀತಿಯಿರುವಂತೆ ಕಾಣುತ್ತದೆ. ಪುತ್ತೂರಿನ ಕಾರ್ಯಕರ್ತರ ಗಡಿಪಾರು ಆದೇಶ ಹಿಂಪಡೆಯಬೇಕು ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು