2:52 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ

16/11/2023, 21:12

ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರಾಟ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಹಿಂದೂ ಕುಟುಂಬಗಳಿಗೆ ಅದರಲ್ಲೂ ಅಪ್ರಾಪ್ತ ಹಿಂದೂ ಯುವತಿಯನ್ನು ಅನ್ಯಮತೀಯ ಪುಸಲಾಯಿಸಿ ಜೀವನ ಹಾಳು ಮಾಡುವುದನ್ನು ತಡೆದ ನಾಲ್ವರು ಹಿಂದೂ ಯವ ಕಾರ್ಯಕರ್ತರ ಮೇಲೆ ಅಪಹರಣ ಕೇಸು ದಾಖಲು ಮಾಡಿ ಪೊಲೀಸ್ ಇಲಾಖೆ ಮೂಲಕ ದಬ್ಬಾಳಿಕೆ ಮಾಡುತ್ತಿದೆ.
ಹಿಂದೂ ಯುವತಿಯರ ನೆರವಿಗೆ ಬರುವ ಹಿಂದೂ ಕಾರ್ಯಕರ್ತರನ್ನು ಕ್ರಿಮಿನಲ್ ಗಳಂತೆ ಕಾಂಗ್ರೆಸ್ ಸರಕಾರ ನೋಡುತ್ತಿದೆ.
ಹಿಂದೂ ಮುಖಂಡರು, ಕಾರ್ಯಕರ್ತರು ಕಾರಣವಿಲ್ಲದೆ ಯಾರದೇ ತಂಟೆಗೆ ಹೋಗುವುದಿಲ್ಲ.ಆದರೆ ಹಿಂದೂ ಸಮಾಜದ ಅಸ್ಮಿತೆಗೆ ದಕ್ಕೆ ಬಂದಾಗ ಹೋರಾಟ ಮಾಡುತ್ತಾರೆ.ಪೊಲೀಸ್ ಠಾಣೆಯಲ್ಲಿ ಈ ಮೂಲಕ ದಾಖಲಾದ ಸಣ್ಣಪುಟ್ಟ ಕೇಸ್ ಆಧಾರವಾಗಿಸಿ ಗಡಿಪಾರು ಆದೇಶ ಮಾಡುವುದನ್ನು ನೋಡಿದರೆ ಹಿಂದೂ ಸಂಘಟನೆಗಳ ಬಗ್ಗೆ ಸರಕಾರಕ್ಕೆ ಭೀತಿಯಿರುವಂತೆ ಕಾಣುತ್ತದೆ. ಪುತ್ತೂರಿನ ಕಾರ್ಯಕರ್ತರ ಗಡಿಪಾರು ಆದೇಶ ಹಿಂಪಡೆಯಬೇಕು ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು