8:05 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ

16/11/2023, 21:12

ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರಾಟ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಹಿಂದೂ ಕುಟುಂಬಗಳಿಗೆ ಅದರಲ್ಲೂ ಅಪ್ರಾಪ್ತ ಹಿಂದೂ ಯುವತಿಯನ್ನು ಅನ್ಯಮತೀಯ ಪುಸಲಾಯಿಸಿ ಜೀವನ ಹಾಳು ಮಾಡುವುದನ್ನು ತಡೆದ ನಾಲ್ವರು ಹಿಂದೂ ಯವ ಕಾರ್ಯಕರ್ತರ ಮೇಲೆ ಅಪಹರಣ ಕೇಸು ದಾಖಲು ಮಾಡಿ ಪೊಲೀಸ್ ಇಲಾಖೆ ಮೂಲಕ ದಬ್ಬಾಳಿಕೆ ಮಾಡುತ್ತಿದೆ.
ಹಿಂದೂ ಯುವತಿಯರ ನೆರವಿಗೆ ಬರುವ ಹಿಂದೂ ಕಾರ್ಯಕರ್ತರನ್ನು ಕ್ರಿಮಿನಲ್ ಗಳಂತೆ ಕಾಂಗ್ರೆಸ್ ಸರಕಾರ ನೋಡುತ್ತಿದೆ.
ಹಿಂದೂ ಮುಖಂಡರು, ಕಾರ್ಯಕರ್ತರು ಕಾರಣವಿಲ್ಲದೆ ಯಾರದೇ ತಂಟೆಗೆ ಹೋಗುವುದಿಲ್ಲ.ಆದರೆ ಹಿಂದೂ ಸಮಾಜದ ಅಸ್ಮಿತೆಗೆ ದಕ್ಕೆ ಬಂದಾಗ ಹೋರಾಟ ಮಾಡುತ್ತಾರೆ.ಪೊಲೀಸ್ ಠಾಣೆಯಲ್ಲಿ ಈ ಮೂಲಕ ದಾಖಲಾದ ಸಣ್ಣಪುಟ್ಟ ಕೇಸ್ ಆಧಾರವಾಗಿಸಿ ಗಡಿಪಾರು ಆದೇಶ ಮಾಡುವುದನ್ನು ನೋಡಿದರೆ ಹಿಂದೂ ಸಂಘಟನೆಗಳ ಬಗ್ಗೆ ಸರಕಾರಕ್ಕೆ ಭೀತಿಯಿರುವಂತೆ ಕಾಣುತ್ತದೆ. ಪುತ್ತೂರಿನ ಕಾರ್ಯಕರ್ತರ ಗಡಿಪಾರು ಆದೇಶ ಹಿಂಪಡೆಯಬೇಕು ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು