11:37 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ನಡುಗಡ್ಡೆ ಸಂತಸ್ತರಿಗೆ ಶಾಶ್ವತ ಪರಿಹಾರ ಆಗ್ರಹಿಸಿ  ಕೆಡಿಪಿ ಸಭೆಗೆ ಮುತ್ತಿಗೆ: ಅಧಿಕಾರಿಗಳ ನಿಯೋಗ ಜತೆ ಶಾಸಕ ಡಿ.ಎಸ್. ಸ್ಥಳಕ್ಕೆ ಭೇಟಿ !

02/08/2021, 09:13

ವರದಿ: ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಪ್ರತಿ ವರ್ಷ ಮಳೆಗಾಲದಲ್ಲಿ ಕೃಷ್ಣಾ ನದಿ ನಡುಗಡ್ಡೆಗಳ ನಿವಾಸಿಗಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ನೀಡುವಲ್ಲಿ 20 ವರ್ಷಗಳಿಂದ ಜಿಲ್ಲಾ ಹಾಗೂ ತಾಲೂಕು ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ತಾಪಂ ಸಭಾಂಗಣದಲ್ಲಿ ಶಾಸಕ ಡಿ.ಎಸ್.ಹೂಲಗೇರಿ ಅಧ್ಯಕ್ಷ ತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಗೆ ಮುತ್ತಿಗೆ ಹಾಕಲಾಯಿತು.

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಬೇಜವಾಬ್ದಾರಿಯಿಂದ ಸಮಸ್ಯೆ ನನೆಗುದಿಗೆ ಬಿದ್ದಿದೆ. ಸರ್ವೆ 19ರಲ್ಲಿ 11 ಕುಟಂಬಗಳಿಗೆ ನಿವೇಶನಗಳ ಹಕ್ಕುಪತ್ರ ನೀಡಲಾಗಿದೆ. ಆದರೆ ಅಲ್ಲಿ ಹಳ್ಳದ ಬಸಿ ನೀರು ಬರುತ್ತಿದ್ದರಿಂದ ವಾಸ ಮಾಡಲು ಯೋಗ್ಯವಲ್ಲದ ಕಾರಣ ಯಳಗುಂದಿ ಗ್ರಾಮದ ಸರ್ಕಾರಿ ಭೂಮಿಯಲ್ಲಿ ನಿವೇಶನಗಳನ್ನು ಒದಗಿಸಬೇಕು. ಈ ಪೈಕಿ ನಡುಗಡ್ಡೆಯಲ್ಲಿ ವಾಸವಿರದ ಮೂರು ನಾಯಕ ಸಮುದಾಯದ ಕುಟಂಬಗಳಿಗೆ ನಿವೇಶನ ಹಕ್ಕುಪತ್ರ ನೀಡುವ ಮೂಲಕ ತಹಶೀಲ್ದಾರರ ಸ್ವಜಾತಿ ಪ್ರೇಮ ಮೆರೆದಿದ್ದಾರೆ. ಇದಲ್ಲದೆ ತಾಲೂಕು ಆಡಳಿತದ ಬೇಜವಾಬ್ದಾರಿಯಿಂದ ನೆಲೆಗುದಿಗೆ ಬಿದ್ದಿದೆ. ಇದರಲ್ಲಿ ಇಲ್ಲಿನ ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು ,ಸಹಾಯಕ ಆಯುಕ್ತರು, ತಹಶೀಲ್ದಾರ ಇಚ್ಚಾಶಕ್ತಿ ಇಲ್ಲದಿರುವುದೇ ಇದಕ್ಕೆ ಮೂಲಕಾರಣ ವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತ್ರೈಮಾಸಿಕ ಕೆಡಿಪಿ ಸಭೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಮನವಿ  ಸಲ್ಲಿಸಿದ್ದರು. ಇದನ್ನರಿತು ಎಚ್ಚೆತ್ತುಕೊಂಡ ಶಾಸಕರು ಅಧಿಕಾರಿಗಳ ನಿಯೋಗ ಸಂತ್ರಸ್ತರ ಶಾಶ್ವತ ಪರಿಹಾರಕ್ಕಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಧಿಕಾರಿಗಳು ಸಂತ್ರಸ್ತರಿಗೆ ನೀಡಬೇಕಾದ ಸರ್ಕಾರದ ಸೌಲಭ್ಯಗಳನ್ನು ನೀಡಲು ಮೀನಮೇಷ ಮಾಡುತ್ತಿರುವುದನ್ನು ಕಂಡ ಹನುಮಂತಪ್ಪ ವೆಂಕಟಾಪುರ ಹೋರಾಟಗಾರರು ತಾಲೂಕ ದಂಡಾಧಿಕಾರಿ ಜತೆ  ಮಾತಿನ ಚಕಮಕಿ ನಡೆಯಿತು.  ಆಗ ಸ್ಥಳದಲ್ಲಿದ್ದ ಶಾಸಕರು ಹಾಗೂ ಸಹಾಯಕ ಆಯುಕ್ತರು ಸಂಘಟಕರಿಗೆ ಸಮಜಾಯಿಸಿ ಅಧಿಕಾರಿಗಳಿಗೆ ಕೂಡಲೇ ದಾಖಲೆಗಳನ್ನು ಸಿದ್ಧಪಡಿಸಿ ಸಂತ್ರಸ್ತರಿಗೆ ಶಾಶ್ವತ ಪರಿಹಾರವನ್ನು ನೀಡಬೇಕೆಂದು ತಾಲೂಕ ದಂಡಾಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಹನುಮಂತಪ್ಪ ವೆಂಕಟಾಪುರ್(ಜಿಲ್ಲಾ ಸಂಘಟನಾ ಸಂಚಾಲಕರು), ಮಹಾದೇವಪ್ಪ ಪರಂಪರ (ತಾಲೂಕ ಸಂಚಾಲಕರು), ಹಾಜಪ್ಪ ಕರಡಕಲ್, ಶರಣಪ್ಪ ಕಟ್ಟಿಮನಿ, ಬಸವರಾಜ್ ಬಂಕದ ಮನೆ, ಲಕ್ಕಪ್ಪ ನಾಗರಾಳ, ಹಾಗೂ ಸಂಘಟನೆ ಸದಸ್ಯರು, ನೆರೆ ಸಂತ್ರಸ್ತ ಫಲಾನುಭವಿಗಳು ಇನ್ನಿತರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು