9:36 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ದ. ಕ. ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 1 ಲಕ್ಷ ಲೀಟರ್‌ನಷ್ಟು ಹಾಲಿನ ಕೊರತೆ: ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಬಹಿರಂಗ

17/11/2023, 23:33

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು ಒಂದು ಲಕ್ಷ ಲೀಟರ್‌ನಷ್ಟು ಹಾಲಿನ ಉತ್ಪಾದನಾ ಕೊರತೆಯಿದ್ದು, ಈ ಕೊರತೆಯನ್ನು ಸರಿದೂಗಿಸಲು ಹೈನುರಾಸುಗಳಿಗೆ ಕೊಡುವ ಆಹಾರ ಮತ್ತು ಪೋಷಕಾಂಶಗಳ ಸಮತೋಲನ ಬಳಕೆಯ ಬಗ್ಗೆ ರೈತರು ಹೆಚ್ಚು ಗಮನ ಹರಿಸಬೇಕೆಂದು ಪಶು ಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹೇಳಿದರು.


ಪಶುವೈದ್ಯರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ’ ಕುರಿತ ವಿಷಯದಲ್ಲಿ ಒಂದು ದಿನದ ತಾಂತ್ರಿಕ
ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿಜ್ಞಾನಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಜೆ. ರಮೇಶ ಮಾತನಾಡಿ, ರೈತರು ಮೇವಿನ ಪರ್ಯಾಯ ಮೂಲಗಳ ಬಗ್ಗೆ ಹೆಚ್ಚು ಗಮನ ಹರಿಸಲು ಸೂಚಿಸಿದರು.
ಸಮಾರಂಭದ ಉದ್ಘಾಟನೆಯನ್ನು ಕ.ಪ.ಪ.ಮೀ.ವಿ.ವಿ. ವಿಸ್ತರಣಾ ನಿರ್ದೇಶಕ ಡಾ.ಎಸ್.ಆರ್. ಸೋಮಶೇಖರ್ ನೆರವೇರಿಸಿದರು
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎನ್‌.ಕೆ.ಎಸ್‌.ಗೌಡ, (ಮುಖ್ಯಸ್ಥರು, ಪ್ರಾಣಿ ಆಹಾರ ವಿಭಾಗ), ಡಾ. ಗಿರಿಧರ್, (ಮುಖ್ಯ ವಿಜ್ಞಾನಿಗಳು, ರಾಷ್ಟ್ರೀಯ ಪಶು ಮೋಷಣೆ ಮತ್ತು ಶರೀರಕ್ರಿಯಾ ವಿಜ್ಞಾನ ಸಂಸ್ಥೆ,ಐ.ಸಿ.ಎ.ಆರ್‍, ಆಡುಗೋಡಿ ಬೆಂಗಳೂರು) ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಐ.ಸಿ.ಎ.ಆರ್.-ಗೇರು, ನಿರ್ದೇಶನಾಲಯ, ಪುತ್ತೂರು ಇವರ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಪರಿಶಿಷ್ಟ ಜಾತಿ ರೈತರಿಗೆ ಹಸುಗಳಿಗೆ ಕೊಟ್ಟಿಗೆಯಲ್ಲಿ ಬಳಸುವ ರಬ್ಬರ್‌ಮ್ಯಾಟ್‌ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಡಾ. ಶಿವಕುಮಾರ್, ಆರ್, (ಸಹಾಯಕ
ಪ್ರಾಧ್ಯಾಪಕರು (ಪ್ರಾಣಿ ಶಾಸ್ತ್ರ) ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು), ಇವರು ಸಂಯೋಜನೆ ಮಾಡಿದ್ದು, ಡಾ.ಮೋಹನ್‌, ಜಿ.ಎಸ್‌.(ಮುಖ್ಯ ವಿಜ್ಞಾನಿಗಳು, ಹಾಗೂ ಡಾ. ಮಂಜೇಶ, ವಿಜ್ಞಾನಿಗಳು, ಗೇರು ನಿರ್ದೇಶನಾಲಯ, ಪುತ್ತೂರು) ಹಾಗೂ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು