11:59 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ದ. ಕ. ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 1 ಲಕ್ಷ ಲೀಟರ್‌ನಷ್ಟು ಹಾಲಿನ ಕೊರತೆ: ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಬಹಿರಂಗ

17/11/2023, 23:33

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು ಒಂದು ಲಕ್ಷ ಲೀಟರ್‌ನಷ್ಟು ಹಾಲಿನ ಉತ್ಪಾದನಾ ಕೊರತೆಯಿದ್ದು, ಈ ಕೊರತೆಯನ್ನು ಸರಿದೂಗಿಸಲು ಹೈನುರಾಸುಗಳಿಗೆ ಕೊಡುವ ಆಹಾರ ಮತ್ತು ಪೋಷಕಾಂಶಗಳ ಸಮತೋಲನ ಬಳಕೆಯ ಬಗ್ಗೆ ರೈತರು ಹೆಚ್ಚು ಗಮನ ಹರಿಸಬೇಕೆಂದು ಪಶು ಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹೇಳಿದರು.


ಪಶುವೈದ್ಯರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ’ ಕುರಿತ ವಿಷಯದಲ್ಲಿ ಒಂದು ದಿನದ ತಾಂತ್ರಿಕ
ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿಜ್ಞಾನಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಜೆ. ರಮೇಶ ಮಾತನಾಡಿ, ರೈತರು ಮೇವಿನ ಪರ್ಯಾಯ ಮೂಲಗಳ ಬಗ್ಗೆ ಹೆಚ್ಚು ಗಮನ ಹರಿಸಲು ಸೂಚಿಸಿದರು.
ಸಮಾರಂಭದ ಉದ್ಘಾಟನೆಯನ್ನು ಕ.ಪ.ಪ.ಮೀ.ವಿ.ವಿ. ವಿಸ್ತರಣಾ ನಿರ್ದೇಶಕ ಡಾ.ಎಸ್.ಆರ್. ಸೋಮಶೇಖರ್ ನೆರವೇರಿಸಿದರು
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎನ್‌.ಕೆ.ಎಸ್‌.ಗೌಡ, (ಮುಖ್ಯಸ್ಥರು, ಪ್ರಾಣಿ ಆಹಾರ ವಿಭಾಗ), ಡಾ. ಗಿರಿಧರ್, (ಮುಖ್ಯ ವಿಜ್ಞಾನಿಗಳು, ರಾಷ್ಟ್ರೀಯ ಪಶು ಮೋಷಣೆ ಮತ್ತು ಶರೀರಕ್ರಿಯಾ ವಿಜ್ಞಾನ ಸಂಸ್ಥೆ,ಐ.ಸಿ.ಎ.ಆರ್‍, ಆಡುಗೋಡಿ ಬೆಂಗಳೂರು) ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಐ.ಸಿ.ಎ.ಆರ್.-ಗೇರು, ನಿರ್ದೇಶನಾಲಯ, ಪುತ್ತೂರು ಇವರ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಪರಿಶಿಷ್ಟ ಜಾತಿ ರೈತರಿಗೆ ಹಸುಗಳಿಗೆ ಕೊಟ್ಟಿಗೆಯಲ್ಲಿ ಬಳಸುವ ರಬ್ಬರ್‌ಮ್ಯಾಟ್‌ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಡಾ. ಶಿವಕುಮಾರ್, ಆರ್, (ಸಹಾಯಕ
ಪ್ರಾಧ್ಯಾಪಕರು (ಪ್ರಾಣಿ ಶಾಸ್ತ್ರ) ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು), ಇವರು ಸಂಯೋಜನೆ ಮಾಡಿದ್ದು, ಡಾ.ಮೋಹನ್‌, ಜಿ.ಎಸ್‌.(ಮುಖ್ಯ ವಿಜ್ಞಾನಿಗಳು, ಹಾಗೂ ಡಾ. ಮಂಜೇಶ, ವಿಜ್ಞಾನಿಗಳು, ಗೇರು ನಿರ್ದೇಶನಾಲಯ, ಪುತ್ತೂರು) ಹಾಗೂ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು