11:36 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಸ್ಕಿ ಲಾಕ್ ಡೌನ್ ಸಂಪೂರ್ಣ ಯಶಸ್ವಿ: ವಾಹನ  ಸವಾರರಿಗೆ ಬಿಸಿ ಮುಟ್ಟಿಸಿದ ಖಾಕಿ ಅಧಿಕಾರಿಗಳು

17/05/2021, 18:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka news@gmail.com

ಕೋವಿಡ್ 19 ನಿಯಂತ್ರಣಕಾಗಿ ಬಿಗಿ ಬಂದೋಬಸ್ತ್ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಆದೇಶದಂತೆ  ಮಸ್ಕಿ ತಾಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಯಶಸ್ವಿಯಾಗಿದೆ.  


ಪಟ್ಟಣ ಸೇರಿದಂತೆ ಮಸ್ಕಿ ತಾಲೂಕಿನ ಬೆಳ್ಳಂಬೆಳಗ್ಗೆ ಬೀದಿಗಿಳಿದ ಪೊಲೀಸ್ ಸಿಪಿಐ ದೀಪಕ್ ಬೋಸು ರೆಡ್ಡಿ, ಪಿಎಸ್ಐ ಸಿದ್ದರಾಮ ಬಿದರಾಣಿ ನೇತೃತ್ವದಲ್ಲಿ ಪೊಲೀಸರು  ಮತ್ತು ಪುರಸಭೆ ಸಿಬ್ಬಂದಿ ಪ್ರಮುಖ ರಸ್ತೆಗಳಲ್ಲಿ ಗಸ್ತು ನಡೆಸಿ ಕೋವಿಡ್ ನಿಯಮ ಉಲ್ಲಂಘಿಸಿ ರಸ್ತೆಗೆ ಬಂದ ವಾಹನ ಸವಾರರಿಗೆ ಹಾಗೂ ಅಂಗಡಿಗಳನ್ನು ತೆರೆದಿದ್ದ ಮಾಲೀಕರಿಗೆ ಬಿಸಿ ಮುಟ್ಟಿಸಿದರು. ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಎಲ್ಲ ರಸ್ತೆಗಳನ್ನು ಲಾಕ್ ಮಾಡಲಾಗಿತ್ತು. ಕೆಲವೊಂದು ಕಡೆ ಸಾರ್ವಜನಿಕರು ಬಾರಿ ಗೇಟುಗಳನ್ನು ಕಿತ್ತುಹಾಕಿದರು. ಜನರು ವಾಹನ ಚಲಾಯಿಸಿಕೊಂಡು ಹೋಗುವುದು ಕಂಡುಬಂದಿತ್ತು. ಅಂತವರಿಗೆ ಪೊಲೀಸರು ಎಚ್ಚರಿಕೆ ನೀಡಿ ಮರಳಿ ಮನೆಗೆ ಹೋಗುವಂತೆ ಕಳಿಸಿದರು. ಪಟ್ಟಣದ ಮುಖ್ಯರಸ್ತೆಗಳಲ್ಲಿ ಅಶೋಕ ವೃತ್ತ, ಕನಕ ವೃತ್ತ, ವಾಲ್ಮೀಕಿ ವೃತ್ತ, ಮೇನ್ ಬಜಾರ್ ಸೇರಿದಂತೆ ಎಲ್ಲ ರಸ್ತೆಗಳು ಜನ ಇಲ್ಲದೆ ಬಿಕೋ ಎನ್ನುವ ದೃಶ್ಯ ಕಂಡುಬಂತು. ಅಲ್ಲೊಂದು ಇಲ್ಲೊಂದು ಅಲ್ಲೊಂದು ಇಲ್ಲೊಂದು ವಾಹನ ತಿರುಗಾಡುತ್ತಿ ಕಂಡುಬಂದಿತ್ತು. ಅಂತಹ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ದಂಡ ಹಾಕಿ ಕಳಿಸುವ ದೃಶ್ಯ ಕಂಡು ಬಂತು. ಪುರಸಭೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ನೇತೃತ್ವದಲ್ಲಿ ನೇತೃತ್ವದಲ್ಲಿ ಪುರಸಭೆ ಸಿಬ್ಬಂದಿ ಸಿಬ್ಬಂದಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ  ಲಾಕ್ ಡೌನ್ ಇದ್ದು ಅಂಗಡಿಗಳನ್ನು ತೆರೆಯದಂತೆ ಮನವಿ ಮಾಡುವುದು ಕಂಡುಬಂದಿತ್ತು ಮಸ್ಕಿ ಕ್ಷೇತ್ರದ ಮೆದಿಕಿನಾಳ ಅಂತರಗಂಗೆ ನಾಗರಬೆಂಚಿ ಮಸ್ಕಿ ತಾಂಡಾ ಸೇರಿದಂತೆ ಜನ ಗುಂಪು ಗುಂಪು ಕೊಡುವುದನ್ನು ಬಿಡಬೇಕೆಂದು ಪೊಲೀಸರು ಮುನ್ನೆಚ್ಚರಿಕೆ ನೀಡಿದರು ತಸಿಲ್ದಾರ್ ಬಲರಾಮ್ ಕಟ್ಟಿಮನಿ ಸಿಪಿಐ ದೀಪಕ್ ಬೋಸರಾಜ್ ಪಿಎಸ್ಐ ಸಿದ್ದರಾಮ ಬಿದರಾಣಿ ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ್ ಸೇರಿದಂತೆ ಇನ್ನಿತರ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡುವ ದೃಶ್ಯ ಕಂಡುಬಂದಿತು.

ಇತ್ತೀಚಿನ ಸುದ್ದಿ

ಜಾಹೀರಾತು