4:08 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಸ್ಕಿ ಲಾಕ್ ಡೌನ್ ಸಂಪೂರ್ಣ ಯಶಸ್ವಿ: ವಾಹನ  ಸವಾರರಿಗೆ ಬಿಸಿ ಮುಟ್ಟಿಸಿದ ಖಾಕಿ ಅಧಿಕಾರಿಗಳು

17/05/2021, 18:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka news@gmail.com

ಕೋವಿಡ್ 19 ನಿಯಂತ್ರಣಕಾಗಿ ಬಿಗಿ ಬಂದೋಬಸ್ತ್ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಆದೇಶದಂತೆ  ಮಸ್ಕಿ ತಾಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಯಶಸ್ವಿಯಾಗಿದೆ.  


ಪಟ್ಟಣ ಸೇರಿದಂತೆ ಮಸ್ಕಿ ತಾಲೂಕಿನ ಬೆಳ್ಳಂಬೆಳಗ್ಗೆ ಬೀದಿಗಿಳಿದ ಪೊಲೀಸ್ ಸಿಪಿಐ ದೀಪಕ್ ಬೋಸು ರೆಡ್ಡಿ, ಪಿಎಸ್ಐ ಸಿದ್ದರಾಮ ಬಿದರಾಣಿ ನೇತೃತ್ವದಲ್ಲಿ ಪೊಲೀಸರು  ಮತ್ತು ಪುರಸಭೆ ಸಿಬ್ಬಂದಿ ಪ್ರಮುಖ ರಸ್ತೆಗಳಲ್ಲಿ ಗಸ್ತು ನಡೆಸಿ ಕೋವಿಡ್ ನಿಯಮ ಉಲ್ಲಂಘಿಸಿ ರಸ್ತೆಗೆ ಬಂದ ವಾಹನ ಸವಾರರಿಗೆ ಹಾಗೂ ಅಂಗಡಿಗಳನ್ನು ತೆರೆದಿದ್ದ ಮಾಲೀಕರಿಗೆ ಬಿಸಿ ಮುಟ್ಟಿಸಿದರು. ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಎಲ್ಲ ರಸ್ತೆಗಳನ್ನು ಲಾಕ್ ಮಾಡಲಾಗಿತ್ತು. ಕೆಲವೊಂದು ಕಡೆ ಸಾರ್ವಜನಿಕರು ಬಾರಿ ಗೇಟುಗಳನ್ನು ಕಿತ್ತುಹಾಕಿದರು. ಜನರು ವಾಹನ ಚಲಾಯಿಸಿಕೊಂಡು ಹೋಗುವುದು ಕಂಡುಬಂದಿತ್ತು. ಅಂತವರಿಗೆ ಪೊಲೀಸರು ಎಚ್ಚರಿಕೆ ನೀಡಿ ಮರಳಿ ಮನೆಗೆ ಹೋಗುವಂತೆ ಕಳಿಸಿದರು. ಪಟ್ಟಣದ ಮುಖ್ಯರಸ್ತೆಗಳಲ್ಲಿ ಅಶೋಕ ವೃತ್ತ, ಕನಕ ವೃತ್ತ, ವಾಲ್ಮೀಕಿ ವೃತ್ತ, ಮೇನ್ ಬಜಾರ್ ಸೇರಿದಂತೆ ಎಲ್ಲ ರಸ್ತೆಗಳು ಜನ ಇಲ್ಲದೆ ಬಿಕೋ ಎನ್ನುವ ದೃಶ್ಯ ಕಂಡುಬಂತು. ಅಲ್ಲೊಂದು ಇಲ್ಲೊಂದು ಅಲ್ಲೊಂದು ಇಲ್ಲೊಂದು ವಾಹನ ತಿರುಗಾಡುತ್ತಿ ಕಂಡುಬಂದಿತ್ತು. ಅಂತಹ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ದಂಡ ಹಾಕಿ ಕಳಿಸುವ ದೃಶ್ಯ ಕಂಡು ಬಂತು. ಪುರಸಭೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ನೇತೃತ್ವದಲ್ಲಿ ನೇತೃತ್ವದಲ್ಲಿ ಪುರಸಭೆ ಸಿಬ್ಬಂದಿ ಸಿಬ್ಬಂದಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ  ಲಾಕ್ ಡೌನ್ ಇದ್ದು ಅಂಗಡಿಗಳನ್ನು ತೆರೆಯದಂತೆ ಮನವಿ ಮಾಡುವುದು ಕಂಡುಬಂದಿತ್ತು ಮಸ್ಕಿ ಕ್ಷೇತ್ರದ ಮೆದಿಕಿನಾಳ ಅಂತರಗಂಗೆ ನಾಗರಬೆಂಚಿ ಮಸ್ಕಿ ತಾಂಡಾ ಸೇರಿದಂತೆ ಜನ ಗುಂಪು ಗುಂಪು ಕೊಡುವುದನ್ನು ಬಿಡಬೇಕೆಂದು ಪೊಲೀಸರು ಮುನ್ನೆಚ್ಚರಿಕೆ ನೀಡಿದರು ತಸಿಲ್ದಾರ್ ಬಲರಾಮ್ ಕಟ್ಟಿಮನಿ ಸಿಪಿಐ ದೀಪಕ್ ಬೋಸರಾಜ್ ಪಿಎಸ್ಐ ಸಿದ್ದರಾಮ ಬಿದರಾಣಿ ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ್ ಸೇರಿದಂತೆ ಇನ್ನಿತರ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡುವ ದೃಶ್ಯ ಕಂಡುಬಂದಿತು.

ಇತ್ತೀಚಿನ ಸುದ್ದಿ

ಜಾಹೀರಾತು