10:07 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಬಾಳೂರು: ನ.20ರಂದು ಪ್ಯಾರಾಲಂಪಿಕ್ ಚಿನ್ನ ಗೆದ್ದ ರಕ್ಷಿತಾರಾಜುಗೆ ಸನ್ಮಾನ, ಅಭಿನಂದನಾ ಸಮಾರಂಭ

18/11/2023, 17:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೂರು ಹೋಬಳಿಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಾಳೂರು ನಾಗರೀಕರ ವೇದಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಾಳೂರು ಹೋಬಳಿಯ ನಾಗರೀಕರ ವೇದಿಕೆಯ ಅಧ್ಯಕ್ಷ ಸೋಮೇಶ್ ಮರ್ಕಲ್ ಹೇಳಿದರು.

ಅವರು ಬಾಳೂರಿನಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವದು, ಚೀನಾದ ಹ್ಯಾಂಗ್ ಝ್ ನಲ್ಲಿ ಏಷ್ಯನ್ ಪ್ಯಾರಾಲಂಪಿಕ್ ಕ್ರೀಡಾಕೂಟದಲ್ಲಿ ಬಾಳೂರು ಗ್ರಾಮದ ಹೆಸರನ್ನು ಚಿನ್ನದ ಪದಕ ಪಡೆಯುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿದ ಸ್ಥಳೀಯ ಕ್ರೀಡಾಪಟು ರಕ್ಷಿತಾರಾಜು ಹಾಗೂ ಅವರ ಕೋಚ್ ರಾಹುಲ್ ಬಾಲಕೃಷ್ಣ ಅವರನ್ನು ಸನ್ಮಾನಿಸಲಾಗುವುದು. ನಂತರ ಬಾಳೂರು ಹೋಬಳಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಗುವುದು. ಇದೇ ತಿಂಗಳ 20ರಂದು ಬೆಳಗ್ಗೆ 10 ಗಂಟೆಗೆ ರಕ್ಷಿತಾರಾಜು ಅವರನ್ನು ಕಲ್ಲಕ್ಕಿ ಸರ್ಕಾರಿ ಶಾಲೆಯಿಂದ ಬಾಳೂರು ದರ್ಬಾರ್ ಪೇಟೆವರೆಗೆ ಮೆರವಣಿಗೆ ನಡೆಸಲಾಗುವುದು. ನಂತರ 11 ಗಂಟೆಗೆ ದರ್ಬಾರ್ ಪೇಟೆ ಅಂಗನವಾಡಿ ಬಳಿ ಸಭಾ ಕಾರ್ಯಕ್ರಮವನ್ನು ಶಾಸಕರಾದ ನಯನಾ ಮೋಟಮ್ಮ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್, ಬಾಳೂರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಕ್ರೀಡಾ ಸಾಧಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು