7:50 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ರಸ್ತೆ ಸೇತುವೆ ಶಿಥಿಲ: ಅಧಿಕಾರಿಗಳ ನಿರ್ಲಕ್ಷ್ಯ; ಅಪಾಯಕ್ಕೆ ಆಹ್ವಾನ ,

19/11/2023, 13:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳ ದೇವರಮನೆಗೆ ಸಾಗುವ ರಸ್ತೆಯ ಇಕ್ಕಟ್ಟಾದ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಸ್ಥಳೀಯ ಮುಖಂಡ ಬಿ.ಸಿ. ಪ್ರವೀಣ್ ಮಾತನಾಡಿ ‘ ದೇವರಮನೆ ಧಾರ್ಮಿಕ ಕ್ಷೇತ್ರವಾಗಿದ್ದು, ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ. ಆದರೆ ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ. ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ಹಾಗೂ ಸೇತುವೆ ದುರಸ್ತಿಗೆ ಶಾಸಕಿ ನಯನಾ ಮೋಟಮ್ಮ ಅವರಿಂದಲೂ ಸಂಬಂಧಿಸಿದ ಅಧಿಕಾರಿಗಳಿಗೆ ಶಿಪಾರಸು ಪತ್ರವನ್ನು ನೀಡಲಾಗಿದೆ. ಆದರೆ ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣ ಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು