12:16 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಜಮೀರ್ ಸಂವಿಧಾನಕ್ಕೂ ಬೆಲೆ ಕೊಡದ ಸಚಿವ; ಕಾಂಗ್ರೆಸ್ ನಲ್ಲೇ ಹೆಚ್ಚು ಕೋಮುವಾದಿಗಳಿದ್ದಾರೆ: ಶಾಸಕ ಡಾ.ಭರತ್ ಶೆಟ್ಟಿ

19/11/2023, 13:06

ಮಂಗಳೂರು(reporterjarnataka.com):ಎಪಿಜೆ ಅಬ್ದುಲ್ ಕಲಾಂ ಅವರಂತಹ ಶ್ರೇಷ್ಟರನ್ನು ರಾಷ್ಟ್ರಪತಿ ಮಾಡಿದ ಬಿಜೆಪಿ,ಸಂವಿಧಾನಾತ್ಮಕ ಹುದ್ದೆಯನ್ನು ಹೊಂದಿರುವ ಶಾಸಕ ಯು.ಟಿ. ಖಾದರ್ ಅವರಿಗೂ, ಗೌರವ ಕೊಡುತ್ತದೆ. ಜಾತಿ ಮತ ಭೇದವನ್ನು ಪರಿಗಣಿಸಿಲ್ಲ.
ಕಾಂಗ್ರೆಸ್ ವಲಸೆ ನಾಯಕ, ಸಚಿವ ಜಮೀರ್ ಅಹ್ಮದ್ ಸದಾ ತನ್ನ ಕೋಮಿನ ಜನರನ್ನು ಹಿಂದುಗಳ ವಿರುದ್ದ ಎತ್ತಿಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೋಮುವಾದಿ ಎಂಬುದು ಬಹಿರಂಗವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ‌ಯು ಶಾನ್ವಾಝ್ , ಅಬ್ಬಾಸ್ ನಕ್ವಿ‌ ಅವರಂತಹವರಿಗೆ ಸಚಿವ ಸ್ಥಾನ ನೀಡಿ ಗೌರವಿಸಿದೆ. ಅವರೆಲ್ಲಾ ದೇಶದ ಸಂವಿಧಾನ, ರಾಷ್ಟ್ರೀಯತೆಯಲ್ಲಿ ನಂಬಿಕೆ ಯುಳ್ಳ ರಾಷ್ಟ್ರವಾದಿ ಚಿಂತಕರು, ನಿಮ್ಮಂತೆ ಜಾತಿ ಓಲೈಕೆಯ ಸಂಕುಚಿತ ಮನಸ್ಸಿನ ನಾಯಕರಲ್ಲ. ರಾಷ್ಟ್ರೀಯತೆ ಏನೇಂಬುದೇ ನಿಮಗೆ ತಿಳಿದಿಲ್ಲ ಎಂದು ಡಾ.ಭರತ್ ಶೆಟ್ಟಿ ವೈ ತಿರುಗೇಟು ನೀಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಅತಿಯಾದ ಮುಸ್ಲಿಂ ಒಲೈಕೆಗೆ ಮುಂದಾಗಿರುವ ಜಮೀರ್ ಅಹ್ಮದ್ ಪ್ರಚಾರ ಬದಲು ತಮ್ಮ ಜಾತಿಯೇ ಮೇಲು ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ.
ಚಾಮರಾಜಪೇಟೆ, ಹುಬ್ಬಳ್ಳಿ ಮೈದಾನದ ಗಣೇಶೋತ್ಸವ ವಿವಾದದ ತುಪ್ಪ ಸುರಿದ,ಟಿಪ್ಪು ಜಯಂತಿಗೆ ಕುಮ್ಮಕ್ಕು, ಅಪರಾಧ ಕೃತ್ಯ ನಡೆಸಿದವರಿಗೆ ಬೆಂಬಲ ಇಂತಹ ಕೆಲಸ ಕಾರ್ಯಗಳಿಗೆ ಒತ್ತು ನೀಡುವ ಜಮೀರ್ ಅಹ್ಮದ್ ರಿಂದ ಬೇರೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ.
ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳಿಕೆ ಕೊಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷವೇ ಹೆಚ್ಚು ಕೋಮುವಾದಿ ನಾಯಕರನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳುವ ಕಾಲ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು