7:33 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಜಮೀರ್ ಸಂವಿಧಾನಕ್ಕೂ ಬೆಲೆ ಕೊಡದ ಸಚಿವ; ಕಾಂಗ್ರೆಸ್ ನಲ್ಲೇ ಹೆಚ್ಚು ಕೋಮುವಾದಿಗಳಿದ್ದಾರೆ: ಶಾಸಕ ಡಾ.ಭರತ್ ಶೆಟ್ಟಿ

19/11/2023, 13:06

ಮಂಗಳೂರು(reporterjarnataka.com):ಎಪಿಜೆ ಅಬ್ದುಲ್ ಕಲಾಂ ಅವರಂತಹ ಶ್ರೇಷ್ಟರನ್ನು ರಾಷ್ಟ್ರಪತಿ ಮಾಡಿದ ಬಿಜೆಪಿ,ಸಂವಿಧಾನಾತ್ಮಕ ಹುದ್ದೆಯನ್ನು ಹೊಂದಿರುವ ಶಾಸಕ ಯು.ಟಿ. ಖಾದರ್ ಅವರಿಗೂ, ಗೌರವ ಕೊಡುತ್ತದೆ. ಜಾತಿ ಮತ ಭೇದವನ್ನು ಪರಿಗಣಿಸಿಲ್ಲ.
ಕಾಂಗ್ರೆಸ್ ವಲಸೆ ನಾಯಕ, ಸಚಿವ ಜಮೀರ್ ಅಹ್ಮದ್ ಸದಾ ತನ್ನ ಕೋಮಿನ ಜನರನ್ನು ಹಿಂದುಗಳ ವಿರುದ್ದ ಎತ್ತಿಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೋಮುವಾದಿ ಎಂಬುದು ಬಹಿರಂಗವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಟೀಕಿಸಿದ್ದಾರೆ.
ಬಿಜೆಪಿ‌ಯು ಶಾನ್ವಾಝ್ , ಅಬ್ಬಾಸ್ ನಕ್ವಿ‌ ಅವರಂತಹವರಿಗೆ ಸಚಿವ ಸ್ಥಾನ ನೀಡಿ ಗೌರವಿಸಿದೆ. ಅವರೆಲ್ಲಾ ದೇಶದ ಸಂವಿಧಾನ, ರಾಷ್ಟ್ರೀಯತೆಯಲ್ಲಿ ನಂಬಿಕೆ ಯುಳ್ಳ ರಾಷ್ಟ್ರವಾದಿ ಚಿಂತಕರು, ನಿಮ್ಮಂತೆ ಜಾತಿ ಓಲೈಕೆಯ ಸಂಕುಚಿತ ಮನಸ್ಸಿನ ನಾಯಕರಲ್ಲ. ರಾಷ್ಟ್ರೀಯತೆ ಏನೇಂಬುದೇ ನಿಮಗೆ ತಿಳಿದಿಲ್ಲ ಎಂದು ಡಾ.ಭರತ್ ಶೆಟ್ಟಿ ವೈ ತಿರುಗೇಟು ನೀಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಅತಿಯಾದ ಮುಸ್ಲಿಂ ಒಲೈಕೆಗೆ ಮುಂದಾಗಿರುವ ಜಮೀರ್ ಅಹ್ಮದ್ ಪ್ರಚಾರ ಬದಲು ತಮ್ಮ ಜಾತಿಯೇ ಮೇಲು ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ.
ಚಾಮರಾಜಪೇಟೆ, ಹುಬ್ಬಳ್ಳಿ ಮೈದಾನದ ಗಣೇಶೋತ್ಸವ ವಿವಾದದ ತುಪ್ಪ ಸುರಿದ,ಟಿಪ್ಪು ಜಯಂತಿಗೆ ಕುಮ್ಮಕ್ಕು, ಅಪರಾಧ ಕೃತ್ಯ ನಡೆಸಿದವರಿಗೆ ಬೆಂಬಲ ಇಂತಹ ಕೆಲಸ ಕಾರ್ಯಗಳಿಗೆ ಒತ್ತು ನೀಡುವ ಜಮೀರ್ ಅಹ್ಮದ್ ರಿಂದ ಬೇರೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ.
ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳಿಕೆ ಕೊಡುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷವೇ ಹೆಚ್ಚು ಕೋಮುವಾದಿ ನಾಯಕರನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳುವ ಕಾಲ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು