3:46 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಬರೆಯ ಬೇಕಿದ್ದ ನ್ಯಾಯಾಂಗ ಸೇವೆ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ನ್ಯಾಯವಾದಿ!: ಹೈಕೋರ್ಟು ವಿಶೇಷ ಅನುಮತಿ ನೀಡಲು ಕಾರಣ ಏನು ಗೊತ್ತೇ?

20/11/2023, 10:52

ಮಂಗಳೂರು(reporterkarnataka.com): ಮಂಗಳೂರಿನ ತುಂಬು ಗರ್ಭಿಣಿ ನ್ಯಾಯವಾದಿಯೊಬ್ಬರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಗೆ ಸಂಬಂಧಿಸಿದ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ಅತೀ ವಿರಳ ಘಟನೆಯೊಖದಕ್ಕೆ ಕಡಲನಗರಿ ಸಾಕ್ಷಿಯಾಯಿತು.
ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯವಾದಿ ನೇತ್ರಾವತಿ ಅವರು ಬರೆಯಬೇಕಿತ್ತು. ಆದರೆ ಪರೀಕ್ಷೆಯ ಕೇಂದ್ರ ಬೆಂಗಳೂರಿನಲ್ಲಿ ಇತ್ತು. ನೇತ್ರಾವತಿ ಅವರು
ಎಂಟುವರೆ ತಿಂಗಳ ತುಂಬು ಗರ್ಭಿಣಿಯಾಗಿರುವುದರಿಂದಬೆಂಗಳೂರಿಗೆ ತೆರಳಿ ಪರೀಕ್ಷೆ ಬರೆಯಲು ಸಾಧ್ಯವಿರಲಿಲ್ಲ. ಆದುದರಿಖದ ಅವರು ಮಂಗಳೂರಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿದ ಹೈಕೋರ್ಟ್‌ನ ಸಮಿತಿಯು ಈ ಅರ್ಜಿಯನ್ನು ಪುರಸ್ಕರಿಸಿ ಅಭ್ಯರ್ಥಿಯ ಮನವಿಯಂತೆ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಿತ್ತು.
ರಾಜ್ಯ ಹೈಕೋರ್ಟ್‌ನ ವಿಶೇಷ ಅನುಮತಿ ಹಿನ್ನೆಲೆಯಲ್ಲಿ ನೇತ್ರಾವತಿ ನ್ಯಾಯಾಂಗ ಸೇವೆಯ ಮುಖ್ಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯಾಲಯದ ಸಂಕೀರ್ಣದ ಕಟ್ಟಡದಲ್ಲಿ ಶನಿವಾರ ಮತ್ತು ಭಾನುವಾರ ಪರೀಕ್ಷೆ ಬರೆದಿದ್ದಾರೆ. ನೇತ್ರಾವತಿ ಅವರು ತುಂಬು ಗರ್ಭಿಣಿಯಾಗಿರುವುದರಿಂದ ನ್ಯಾಯಾಲಯದ ಆವರಣದಲ್ಲಿ ಆ್ಯಂಬುಲೆನ್ಸ್ ವಾಹನವನ್ನು ಸಜ್ಜುಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು