10:20 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ನಂಜನಗೂಡು: ಕೆಐಎಡಿಬಿಗೆ ಭೂಮಿ ನೀಡಿ ಉದ್ಯೋಗ ಸಿಗದ ರೈತ ಆತ್ಮಹತ್ಯೆ; ಜಿಲ್ಲಾಡಳಿತ ವೈಫಲ್ಯದಿಂದ ಕುಟುಂಬ ಅನಾಥ

20/11/2023, 16:52

ಮೋಹನ್ ನಂಜನಗೂಡು ಮೈಸೂರು

info.reeporterkarnataka@gmail.com

ಕೈಗರಿಕಾ ಪ್ರದೇಶಕ್ಕಾಗಿ ರೈತರಿಂದ ಭೂಮಿ ಪಡೆದುಕೊಂಡು ಉದ್ಯೋಗ ನೀಡದೆ ವಂಚನೆ ಮಾಡಿರುವ ಹಿನ್ನಲೆ.ಡೆಟ್ ನೋಟ್ ಬರೆದಿಟ್ಟು ರೈತ ಯುವಕ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಯುವಕ ಸಿದ್ದರಾಜು(35) ಎಂಬುವವರೆ ಮೃತ ದುರ್ದೈವಿ.


ಅಡಕನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸೇರಿದ ಮೃತ ಸಿದ್ದರಾಜು ಅವರ ಪಿತ್ರಾರ್ಜಿತ ಆಸ್ತಿಯನ್ನು ಕೆಐಎಡಿಬಿ ವಶಪಡಿಸಿಕೊಂಡು ಅದನ್ನು
ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿಗೆ ಹಂಚಿಕೆ ಮಾಡಿತ್ತು.
ಆದರೆ ಕೆಐಎಡಿಬಿ ಪ್ರಕಾರ ಭೂಮಿ ಕಳೆದುಕೊಂಡ ರೈತ ಅಥವಾ ರೈತ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂಬ ನಿಯಮವಿದ್ದರೂ ಮೃತ ರೈತನ ಕುಟುಂಬಕ್ಕೆ ಕೆಐಎಡಿಬಿ ಯಾಗಲಿ ಅಥವ ರೈತರ ಜಮೀನಿನಲ್ಲಿ ಕಾರ್ಖಾನೆ ನಡೆಸುತ್ತಿರುವ ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿ ಯಾಗಲಿ ಮಾನವೀಯತೆ ದೃಷ್ಟಿಯಿಂದಲಾದರು ಉದ್ಯೋಗ ನೀಡದೆ ಇರುವುದು ಘಟನೆಗೆ ಕಾರಣವೆನ್ನಲಾಗಿದೆ.
ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಕಾರ್ಖಾನೆ ಮುಂದೆ ಹಸಿರು ಸೇನೆ ಹಾಗೂ ರೈತ ಸಂಘಟನೆ ಗಳು ಕಳೆದ 45 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಗಳನ್ನು ಸಹ ಹಮ್ಮಿಕೊಂಡಿದ್ದವು. ಆದರೂ ಉದ್ಯೋಗ ನೀಡದ ಕೆಐಎಡಿಬಿ ಹಾಗೂ ಕಾರ್ಖಾನೆಯಿಂದ ಮನನೊಂದ ರೈತ ಸಿದ್ದರಾಜು ಡೆಟ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ‌.
ಮೃತನ ಪತ್ನಿ ರಕ್ಷಿತಾ ನೀಡಿರುವ ದೂರಿನ ಮೇರೆಗೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ.
ಘಟನೆಯ ಬಗ್ಗೆ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಕೆಐಎಡಿಬಿ ಹಾಗೂ ಕಾರ್ಖಾನೆ ಯವರ ರೈತ ವಿರೋಧಿ ನೀತಿಯನ್ನು ಖಂಡಿಸಿ ಮೃತನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು