12:35 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

20/11/2023, 21:55

ಶಿವಮೊಗ್ಗ(reporterkarnataka.com): ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ದಿನಾಂಕ 19ನವೆಂಬರ್ 23 ಭಾನುವಾರದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ. ಎಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ‌ ಹೊನ್ಕಲ್, ಮಂಗಳೂರಿನ‌ ನ್ಯಾಯವಾದಿ, ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ,ಲತಾ ಎಂ. ಕೆ. ತುರುವೇಕೆರೆ, ಜೆ. ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು