12:53 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

20/11/2023, 21:55

ಶಿವಮೊಗ್ಗ(reporterkarnataka.com): ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ದಿನಾಂಕ 19ನವೆಂಬರ್ 23 ಭಾನುವಾರದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ. ಎಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ‌ ಹೊನ್ಕಲ್, ಮಂಗಳೂರಿನ‌ ನ್ಯಾಯವಾದಿ, ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ,ಲತಾ ಎಂ. ಕೆ. ತುರುವೇಕೆರೆ, ಜೆ. ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು