1:33 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ವಿಶೇಷಚೇತನರ ಸೌರ ಸ್ವಉದ್ಯೋಗ ಸಮ್ಮೇಳನ: ಸೌರ ಉದ್ಯಮಿಗಳು ಭಾಗಿ

21/11/2023, 19:06

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnatakarma@gmail.com

ಸೆಲ್ಕೋ ಫೌಂಡೇಶನ್ ಇಂಡಿಯಾ ಸಂಸ್ಥೆ, ಎಪಿಡಿ ಸಂಸ್ಥೆ ಬೆಳಗಾವಿ, ಬರ್ಡ್ ಸಂಸ್ಥೆ,ಬೆಳಗಾವಿಯ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನರ ಸೌರ ಸ್ವ ಉದ್ಯೋಗ ಸಮ್ಮೇಳನವನ್ನು ನಗರದ ಕುಮಾರಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾ ಪಂಚಾಯತ್ ಸಿಇಒ
ಹರ್ಷಲ್ ಬೋಯರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಹರ್ಷಲ್ ಬೋಯರ್, ಸೌರಶಕ್ತಿ ಬಳಸಿಕೊಂಡು ಸ್ವಯಂ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಸೆಲ್ಕೋ ಫೌಂಡೇಶನ್ ಸಂಸ್ಥೆ ಉತ್ತಮ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಮಹಾಪ್ರಬಂಧಕರಾದ ಪ್ರಸನ್ನ ಹೆಗಡೆ ಅವರು ಮಾತನಾಡಿ, ಸೌರಶಕ್ತಿಯು ಕೇವಲ ಬೆಳಕು ನೀಡುವುದಲ್ಲದೆ ಜೀವನ ಕಟ್ಟಿಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಗ್ರಾಮೀಣ ಭಾಗದ ಕಟ್ಟಕಡೆ ವ್ಯಕ್ತಿಗೂ ಸೌರಶಕ್ತಿಯನ್ನು ತಲುಪಿಸುತ್ತಿದ್ದೇವೆ ಎಂದರು.
ದಿ ಅಸೋಶಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿಯ(ಎಪಿಡಿ) ವಿಭಾಗೀಯ ನಿರ್ದೇಶಕರಾದ ರಮೇಶ್ ಗೊಂಗಡಿ ಮಾತನಾಡಿ, ವಿಶೇಷಚೇತನರನ್ನು ಸುಶಿಕ್ಷಿತರನ್ನಾಗಿಸುವುದರ ಜೊತೆಗೆ ಸೆಲ್ಕೋ ಸಹಯೋಗದೊಂದಿಗೆ ಅವರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದರು.
ಬಾಗಲಕೋಟೆಯ ಬರ್ಡ್ಸ್ ಸಂಸ್ಥೆಯ ಮಹಾಂತೇಶ್ ಅಗಸಿ ಮುಂದಿನ ಅವರು ಮಾತನಾಡಿ, ಕಳೆದ 8 ವರ್ಷಗಳಿಂದ ಸೆಲ್ಕೋ ಸಂಸ್ಥೆಯ ಜೊತೆ ಸೇರಿ ಅನೇಕ ವಿಶೇಷಚೇತನರಿಗೆ ಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಮಾಜಿ ಶಾಸಕರು ಹಾಗೂ ನಾಗನೂರ ಬರ್ಡ್ಸ್ ಸಂಸ್ಥೆ ಅಧ್ಯಕ್ಷ ಆರ್. ಎಮ್. ಪಾಟೀಲ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಎರಡು ವಿಶೇಷ ಗುಂಪು ಚರ್ಚೆಗಳನ್ನು ಸೆಲ್ಕೋ ಫೌಂಡೇಷನ್ ನ ಹಿರಿಯ ನಿರ್ವಾಹಕರಾದ ಸುರಭಿ ರಾಜಗೋಪಾಲ್ ಮತ್ತು ಸೆಲ್ಕೋ ಫೌಂಡೇಷನ್ ನ ಪ್ರಾಜೆಕ್ಟ್ ಮ್ಯಾನೇಜರ್ ನಾಗೇಶ್ ರಾವ್ ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಕೆಲವು ಸೌರ ಉದ್ಯಮಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಸೆಲ್ಕೋದ ಬೆಳಗಾವಿ ಏರಿಯಾ ಮ್ಯಾನೇಜರ್ ವಿನಾಯಕ ಹೆಗಡೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು