2:54 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ವಿಶೇಷಚೇತನರ ಸೌರ ಸ್ವಉದ್ಯೋಗ ಸಮ್ಮೇಳನ: ಸೌರ ಉದ್ಯಮಿಗಳು ಭಾಗಿ

21/11/2023, 19:06

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnatakarma@gmail.com

ಸೆಲ್ಕೋ ಫೌಂಡೇಶನ್ ಇಂಡಿಯಾ ಸಂಸ್ಥೆ, ಎಪಿಡಿ ಸಂಸ್ಥೆ ಬೆಳಗಾವಿ, ಬರ್ಡ್ ಸಂಸ್ಥೆ,ಬೆಳಗಾವಿಯ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನರ ಸೌರ ಸ್ವ ಉದ್ಯೋಗ ಸಮ್ಮೇಳನವನ್ನು ನಗರದ ಕುಮಾರಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾ ಪಂಚಾಯತ್ ಸಿಇಒ
ಹರ್ಷಲ್ ಬೋಯರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಹರ್ಷಲ್ ಬೋಯರ್, ಸೌರಶಕ್ತಿ ಬಳಸಿಕೊಂಡು ಸ್ವಯಂ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಸೆಲ್ಕೋ ಫೌಂಡೇಶನ್ ಸಂಸ್ಥೆ ಉತ್ತಮ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಮಹಾಪ್ರಬಂಧಕರಾದ ಪ್ರಸನ್ನ ಹೆಗಡೆ ಅವರು ಮಾತನಾಡಿ, ಸೌರಶಕ್ತಿಯು ಕೇವಲ ಬೆಳಕು ನೀಡುವುದಲ್ಲದೆ ಜೀವನ ಕಟ್ಟಿಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಗ್ರಾಮೀಣ ಭಾಗದ ಕಟ್ಟಕಡೆ ವ್ಯಕ್ತಿಗೂ ಸೌರಶಕ್ತಿಯನ್ನು ತಲುಪಿಸುತ್ತಿದ್ದೇವೆ ಎಂದರು.
ದಿ ಅಸೋಶಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿಯ(ಎಪಿಡಿ) ವಿಭಾಗೀಯ ನಿರ್ದೇಶಕರಾದ ರಮೇಶ್ ಗೊಂಗಡಿ ಮಾತನಾಡಿ, ವಿಶೇಷಚೇತನರನ್ನು ಸುಶಿಕ್ಷಿತರನ್ನಾಗಿಸುವುದರ ಜೊತೆಗೆ ಸೆಲ್ಕೋ ಸಹಯೋಗದೊಂದಿಗೆ ಅವರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದರು.
ಬಾಗಲಕೋಟೆಯ ಬರ್ಡ್ಸ್ ಸಂಸ್ಥೆಯ ಮಹಾಂತೇಶ್ ಅಗಸಿ ಮುಂದಿನ ಅವರು ಮಾತನಾಡಿ, ಕಳೆದ 8 ವರ್ಷಗಳಿಂದ ಸೆಲ್ಕೋ ಸಂಸ್ಥೆಯ ಜೊತೆ ಸೇರಿ ಅನೇಕ ವಿಶೇಷಚೇತನರಿಗೆ ಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಮಾಜಿ ಶಾಸಕರು ಹಾಗೂ ನಾಗನೂರ ಬರ್ಡ್ಸ್ ಸಂಸ್ಥೆ ಅಧ್ಯಕ್ಷ ಆರ್. ಎಮ್. ಪಾಟೀಲ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಎರಡು ವಿಶೇಷ ಗುಂಪು ಚರ್ಚೆಗಳನ್ನು ಸೆಲ್ಕೋ ಫೌಂಡೇಷನ್ ನ ಹಿರಿಯ ನಿರ್ವಾಹಕರಾದ ಸುರಭಿ ರಾಜಗೋಪಾಲ್ ಮತ್ತು ಸೆಲ್ಕೋ ಫೌಂಡೇಷನ್ ನ ಪ್ರಾಜೆಕ್ಟ್ ಮ್ಯಾನೇಜರ್ ನಾಗೇಶ್ ರಾವ್ ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಕೆಲವು ಸೌರ ಉದ್ಯಮಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಸೆಲ್ಕೋದ ಬೆಳಗಾವಿ ಏರಿಯಾ ಮ್ಯಾನೇಜರ್ ವಿನಾಯಕ ಹೆಗಡೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು