12:11 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಜತೆ ಹಾಲಿ ಸಿಎಂ ಸಿದ್ದರಾಮಯ್ಯರೂ ದತ್ತಪೀಠಕ್ಕೆ ಬರಲಿ: ಸಿ.ಟಿ. ರವಿ

21/11/2023, 17:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ದತ್ತಪೀಠಕ್ಕೆ ಬರಲಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಮನವಿ ಮಾಡಿದ್ದಾರೆ.


ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಯು ಸಿಎಂ ಸಿದ್ದರಾಮಯ್ಯನವರಿಗೂ ಮಾದರಿ. ಅವರು ಕೂಡ ದತ್ತಪೀಠಕ್ಕೆ ಬರಲಿ.
ನಾನು ಹಿಂದೂ ಅಲ್ವಾ, ನನ್ನ ಹೆಸರಲ್ಲೇ ರಾಮ ಇದ್ದಾನೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನೀವು ಮಾಲೆ ಹಾಕಿಕೊಂಡು ಬಂದರೆ ನಮ್ಮ ಸತ್ಯದ ಹೋರಾಟಕ್ಕೆ ಬಲ ಬರಲಿದೆ ಎಂದು ಮಾಧ್ಯಮ ಜತೆ ಮಾತನಾಡಿದ ರವಿ ನುಡಿದರು.
ಹಿಂದು ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ನೀವು ಮಾಲೆ ಹಾಕಿದರೆ ಸಚಿವ ಜಮೀರ್ ಅವರು ಕೂಡ ಮಾಲೆ ಹಾಕೇ ಹಾಕುತ್ತಾರೆ. ಆಗ 5 ದಶಕದ ಹೋರಾಟಕ್ಕೆ ಬಲ ಬರುತ್ತೆ, ಸತ್ಯವನ್ನ ಎತ್ತಿ ಹಿಡಿದಂತಾಗುತ್ತೆ. ನಮ್ಮ ಧರ್ಮದ ಪ್ರಕಾರ ನಡೆದುಕೊಳ್ಳಲು ಯಾರಿಗೆ ಏಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದರು.
ಯಾರೂ ಎಲೆಕ್ಷನ್ ಟೈಂ ನಲ್ಲಿ ಮಾತ್ರ ಹಿಂದೂಗಳಾಗಬಾರದು. ಜೀವನ ಪರ್ಯಂತ ಹಿಂದೂಗಳಾಬೇಕು. ಹಿಂದುತ್ವದ ವಿಚಾರ ಬಂದಾಗ ಹಿಂದೆ ನೋಡಲೇಬಾರದು ಮುಂದಕ್ಕೆ ನೋಡಬೇಕು ಎಂದು ಸಿ.ಟಿ. ರವಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು